2:43 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು