4:43 PM Friday1 - May 2026
ಬ್ರೇಕಿಂಗ್ ನ್ಯೂಸ್
ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು