9:15 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮೈಸೂರು | ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ‘ವರ್ಧಂತಿ ಉತ್ಸವ’: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ

04/08/2026, 13:38

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ‘ವರ್ಧಂತಿ ಉತ್ಸವ’ವು ಇಂದು ಚಾಮುಂಡಿ ಬೆಟ್ಟದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಧಾರ್ಮಿಕ ಶ್ರದ್ಧಾ-ಭಕ್ತಿಯಿಂದ ಜರುಗುತ್ತಿದೆ.

ಮಹೋತ್ಸವದ ಹಿನ್ನೆಲೆಯಲ್ಲಿ ಮುಂಜಾನೆ 3.30 ರಿಂದಲೇ ಧಾರ್ಮಿಕ ವಿಧಿ-ವಿಧಾನಗಳು ಆರಂಭಗೊಂಡಿದ್ದು, ದೇವಿಗೆ ಅಭ್ಯಂಜನ ಸ್ನಾನ, ರುದ್ರಾಭಿಷೇಕ ಹಾಗೂ ಮಹಾನ್ಯಾಸ ಪೂಜೆಗಳನ್ನು ನೆರವೇರಿಸಿ, ಅಪರೂಪದ ರಾಜಮುಡಿ ಹಾಗೂ ರತ್ನಖಚಿತ ಚಿನ್ನಾಭರಣಗಳಿಂದ ದಿವ್ಯಾಲಂಕಾರಗೊಳಿಸಿ ಮಹಾಮಂಗಳಾರತಿ ಮಾಡಲಾಯಿತು.ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳ ಅನುಕೂಲಕ್ಕಾಗಿ ಲಲಿತಮಹಲ್ ಅರಮನೆ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಕೆ.ಎಸ್.ಆರ್.ಟಿ.ಸಿ ಬಸ್ ಸೌಲಭ್ಯ, ಸುಲಭ ದರ್ಶನ ವ್ಯವಸ್ಥೆ, ಅನ್ನಪ್ರಸಾದ ವಿನಿಯೋಗ ಹಾಗೂ ನಗರ ಪೊಲೀಸರಿಂದ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.ದೇವಿಯ ಮೂರ್ತಿಗೆ ಬೆಟ್ಟದಲ್ಲಿರುವ ದೇವಿ ಕೆರೆಯಿಂದ ತಂದ ಶುದ್ದ ಜಲದಿಂದ ಅಭಿಷೇಕ ಮಾಡಿ, ನಂತರ ತಾಯಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಬಳಿಕ ವಿವಿಧ ಹೂವುಗಳಿಂದ ಅಲಂಕಾರ ಮಾಡಿ, ಕುಂಕುಮಾರ್ಚನೆ, ಸಹಸ್ರನಾಮಾರ್ಚನೆ ನೆರವೇರಿಸಲಾಗಿದೆ.ಮಹಾ ಮಂಗಳಾರತಿ ಬಳಿಕ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಇರಿಸಿ, ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. ವರ್ಧಂತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೆಚ್ಚು ಭಕ್ತರು ಆಗಮಿಸಿದ್ದರಿಂದ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು