ಇತ್ತೀಚಿನ ಸುದ್ದಿ
ಮೈಸೂರು: ಹಾಡಹಗಲೇ ಕಾರು ಅಡ್ಡಗಟ್ಟಿ ತರಕಾರಿ ವ್ಯಾಪಾರಿಯ ಭೀಕರ ಹತ್ಯೆ
07/10/2025, 20:43

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com
ಮೈಸೂರಲ್ಲಿ ಹಾಡಹಗಲೇ ಬರ್ಬರ ಕೊಲೆ ನಡೆದಿದೆ. ಮೈಸೂರು ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನ ಬಳಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ವೆಂಕಟೇಶ್ ಆಲಿಯಾಸ್ ಗಿಲಿಗಿಲಿ ನಾರಾಯಣ (45) ಕೊಲೆಯಾದ ವ್ಯಕ್ತಿ. ಕಾರಿನ ಗ್ಲಾಸ್ ಓಪನ್ ಮಾಡಿಕೊಂಡು ವೆಂಕಟೇಶ್ ತೆರಳುವಾಗ ಆಟೋ ಮತ್ತು ಬೈಕ್ನಲ್ಲಿ ಬಂದ ಕಿಡಿಗೇಡಿಗಳು, ಕಾರದ ಪುಡಿ ಎರಚಿ ದಾಳಿ ಮಾಡಿದ್ದಾರೆ. ಕೃತ್ಯ ಎಸಗುವಾಗ ನಾಲ್ಕು ಮಂದಿ ಇದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ನಜರ್ಬಾದ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಮೃತ ವ್ಯಕ್ತಿಯ ಶವವನ್ನು ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ನಜರ್ ಬಾದ್ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿ, ಮೃತದೇಹವನ್ನು ಶವಗಾರಕ್ಕೆ ಸಾಗಣೆ ಮಾಡಿದ್ದಾರೆ.
*ಸ್ನೇಹಿತ ನಾಗರಾಜು ಹೇಳಿದ್ದೇನು ?:* ಮೃತ ವೆಂಕಟೇಶ್ ಸ್ನೇಹಿತ ನಾಗರಾಜು ಕೆ.ಆರ್.ಆಸ್ಪತ್ರೆಯ ಶವಗಾರದ ಬಳಿ ಮಾಧ್ಯಮಗಳ ಜೊತೆ ಮಾತನಾಡಿ, ವೆಂಕಟೇಶ್ ಕಾರಿನಲ್ಲಿ ಹೋಗುವಾಗ ಆತನ ಕಣ್ಣಿಗೆ ಕಾರದ ಪುಡಿ ಎರಚಿ ಆತನನ್ನು ಬರ್ಬರವಾಗಿ ಕೈ ತಲೆ ಹಾಗೂ ಹೊಟ್ಟೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ. ಆಟೋ ಹಾಗೂ ಬೈಕಿನಲ್ಲಿ ಬಂದ ನಾಲ್ವರು ಕೊಲೆ ಮಾಡಿದ್ದಾರೆ. ವೆಂಕಟೇಶ್ RMC ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರು ಎಂದು ಸ್ನೇಹಿತ ನಾಗರಾಜು ತಿಳಿಸಿದ್ದಾರೆ.