4:34 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು ಪಾರು

19/12/2024, 15:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ವೃದ್ದರೊಬ್ಬರ ಕಾಡಾನೆ ದಾಳಿ ನಡೆಸಿ ಸಾವು ಸಂಭವಿಸಿದೆ.
20 ದಿನದಲ್ಲಿ ಕಾಡಾನೆ ದಾಳಿಗೆ ಇದು ಎರಡನೇ ಬಲಿಯಾಗಿದೆ.
ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ನಡೆಸಿದೆ. ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದಾನೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಮೃತಪಟ್ಟವರನ್ನು ಎಲಿಯಾಸ್ (75) ಎಂದು ಗುರುತಿಸಲಾಗಿದೆ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾರೆ. ಎಲಿಯಾಸ್ ಅವರು ಕೇರಳದಿಂದ ಬಂದು ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಕಾಡಾನೆ ಎಲಿಯಾಸ್ ಅವರನ್ನು
ಸಾಯಿಸಿದ ಬಳಿಕ ಮೃತದೇಹ ಸುತ್ತುತ್ತಾ ಸ್ಥಳದಲ್ಲೇ ನಿಂತಿತ್ತು.
ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ಸಲಗ ನಿಂತಿತ್ತು.ನವೆಂಬರ್ 30ರಂದು ಸೀತೂರಲ್ಲಿ ಉಮೇಶ್‌ ಎಂಬುವರನ್ನ ಕಾಡಾನೆ ಸಾಯಿಸಿತ್ತು.
ಅರಣ್ಯ ಇಲಾಖೆ ವಿರುದ್ಧ ಮಲೆನಾಡಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲೇ ಸ್ಥಳಿಯರು, ಪೊಲೀಸರು, ಅರಣ್ಯ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು