9:29 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು ಪಾರು

19/12/2024, 15:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ವೃದ್ದರೊಬ್ಬರ ಕಾಡಾನೆ ದಾಳಿ ನಡೆಸಿ ಸಾವು ಸಂಭವಿಸಿದೆ.
20 ದಿನದಲ್ಲಿ ಕಾಡಾನೆ ದಾಳಿಗೆ ಇದು ಎರಡನೇ ಬಲಿಯಾಗಿದೆ.
ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ನಡೆಸಿದೆ. ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದಾನೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಮೃತಪಟ್ಟವರನ್ನು ಎಲಿಯಾಸ್ (75) ಎಂದು ಗುರುತಿಸಲಾಗಿದೆ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾರೆ. ಎಲಿಯಾಸ್ ಅವರು ಕೇರಳದಿಂದ ಬಂದು ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಕಾಡಾನೆ ಎಲಿಯಾಸ್ ಅವರನ್ನು
ಸಾಯಿಸಿದ ಬಳಿಕ ಮೃತದೇಹ ಸುತ್ತುತ್ತಾ ಸ್ಥಳದಲ್ಲೇ ನಿಂತಿತ್ತು.
ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ಸಲಗ ನಿಂತಿತ್ತು.ನವೆಂಬರ್ 30ರಂದು ಸೀತೂರಲ್ಲಿ ಉಮೇಶ್‌ ಎಂಬುವರನ್ನ ಕಾಡಾನೆ ಸಾಯಿಸಿತ್ತು.
ಅರಣ್ಯ ಇಲಾಖೆ ವಿರುದ್ಧ ಮಲೆನಾಡಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲೇ ಸ್ಥಳಿಯರು, ಪೊಲೀಸರು, ಅರಣ್ಯ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು