4:18 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ನ.30ರ ಬಳಿಕ ಉಚಿತ ಪಡಿತರ ವಿತರಣೆ ಇಲ್ಲ; ಕೇಂದ್ರ ಸರಕಾರ ಸ್ಪಷ್ಟನೆ

06/11/2021, 13:48

ಹೊಸದಿಲ್ಲಿ(reporterkarnataka.com): ಕೊರೊನ ಲಾಕ್ಡೌನ್ ವಿತರಿಸಲಾಗುತ್ತಿದ್ದ ಉಚಿತ ಪಡಿತರ ನಿಲ್ಲಿಸಲಾಗುವುದು ಎಂದು ಕೇಂದ್ರ ಸರ್ಕಾರ  ತಿಳಿಸಿದೆ. ಸರಕಾರ ನವೆಂಬರ್ 30 ರ ಬಳಿಕ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ..  

ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಯಲ್ಲಿ ದೇಶದ 80 ಕೋಟಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಆರ್ಥಿಕತೆಯಲ್ಲಿ ಚೇತರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 30ರ ನಂತರ ಉಚಿತ ಪಡಿತರವನ್ನು ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಕೋವಿಡ್-19 ನಿಂದ ಉಂಟಾದ ತೊಂದರೆ ನಿವಾರಿಸಲು PMGKAY ಅನ್ನು ಮಾರ್ಚ್ 2020 ರಲ್ಲಿ ಘೋಷಿಸಲಾಯಿತು. ಆರಂಭದಲ್ಲಿ, ಈ ಯೋಜನೆಯನ್ನು ಏಪ್ರಿಲ್-ಜೂನ್ 2020 ಅವಧಿಗೆ ಪ್ರಾರಂಭಿಸಲಾಗಿತ್ತು. ಆದರೆ ನಂತರ ಅದನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು