2:13 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ ತೀವ್ರ ಮುಖಭಂಗ

30/11/2021, 21:48

ಬೆಂಗಳೂರು(reporterkarnataka.com): ಪೇಜಾವರ ಶ್ರೀಗಳ ಕುರಿತು ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರು ನೀಡಿದ ಹೇಳಿಕೆಯ ವಿರುದ್ಧ ಬೆಂಗಳೂರಿನ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಆ ಮೂಲಕ ಹಂಸಲೇಖ ವಿರುದ್ಧ ದೂರು ನೀಡಿದವರಿಗೆ ತೀವ್ರ ಮುಖಭಂಗವಾಗಿದೆ.

ಹಂಸಲೇಖ ಅವರು ತನ್ನ ವಿರುದ್ಧ ದಾಖಲಾದ ದೂರು ವಿರುದ್ಧ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ರಿಟ್‌ ಅರ್ಜಿಯಲ್ಲಿ ತನ್ನ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಗಳಿಗೆ ತಡೆಯಾಜ್ಞೆ ನೀಡಿದೆ.

ಮೈಸೂರಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹಂಸಲೇಖ ಅವರು ಅಸ್ಪೃಶ್ಯತೆ ಕುರಿತು ಮಾತನಾಡಿದ್ದರು.ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ ಮಾಡಲು ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್‌ ಬಂದಿತ್ತು. ನಿಜಾನಾ?! ದಲಿತರ ಮನೆಗೆ ಹೋಗಿ ಕೂತಿದ್ದರಂತೆ. ಕುಳಿತುಕೊಳ್ಳೋದಕ್ಕೆ ಆಗುತ್ತಷ್ಟೇ. ಅವರು ಕೋಳಿ ಕೊಟ್ಟರೆ ತಿನ್ನಕ್‌ ಆಗುತ್ತಾ? ಕೋಳಿ ಬೇಡ ಕುರಿ ರಕ್ತ ಫ್ರೈ ಮಾಡಿಕೊಟ್ಟರೆ ತಿಂತಾರಾ? ಲಿವರ್‌ ತಿಂತಾರಾ? ಸಾಧ್ಯವಿಲ್ಲ’ ಎಂದು ಹೇಳಿದ್ದರು.

ಮಹಾತ್ಮ ಗಾಂಧಿ ಹೇಳಿದಂತೆ ದಲಿತರ ಮನೆಗೆ ಬಲಿತರು ಬರಬೇಕು. ಅವರ ಮನೆಗೂ ದಲಿತರನ್ನು ಕರೆದುಕೊಂಡು ಹೋಗಬೇಕು. ನಮ್ಮನೆ ಲೋಟ ನೀನು ಮುಟ್ಟು. ನೀ ಕುಡಿದದನ್ನ ನಾವು ತೊಳಿತೀವಿ ಅಂತ ಅವರು ಹೇಳಬೇಕು. ಅದು ನಿಜವಾದ ಕ್ಷಣ.’ಎಂದು ಹಂಸಲೇಖ ಸಲಹೆ ನೀಡಿದ್ದರು.

ಹಂಸಲೇಖ ಅವರ ಪರ ವಕೀಲರಾದ ಕಾಶೀನಾಥ್ ಮತ್ತು ಸಿ.ಎಸ್‌. ದ್ವಾರಕಾನಾಥ್‌ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು