7:53 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಾಗಮಂಗಲ: ಸಾರ್ವಜನಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ

11/08/2021, 20:09

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಂಡು ಹಸಿರು ಪರಿಸರ ಸಂರಕ್ಷಿಸುವ ಹೊಣೆ ಪ್ರತಿಯೊಬ್ಬರಲ್ಲೂ ಮೈಗೂಡಿಸಿಕೊಳ್ಳಬೇಕೆಂದು ನೆಹರು ಯುವ ಕೇಂದ್ರದ ಸ್ವಯಂಸೇವಕಿ ಮಹಾಲಕ್ಷ್ಮಿ ಹೇಳಿದರು.

ಅವರಿಂದ ನಾಗಮಂಗಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಆವರಣದಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಸರ ಸಂರಕ್ಷಿಸುವ ಹೊಣೆ ಪ್ರತಿಯೊಬ್ಬ ನಾಗರಿಕರು ಮೈಗೂಡಿಸಿಕೊಳ್ಳಬೇಕು.ಸ್ವಚ್ಛತೆಯ ಅರಿವು ಮೂಡಿಸಿ ಪರಿಸರ ಸಂರಕ್ಷಿಸಬೇಕೆಂದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಸಸಿ ನೆಡುವ ಮುಖಾಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಮಹಾದೇವಪ್ಪನವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದ ಪ್ರತಿಜ್ಞಾ ವಿಧಿಯನ್ನು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶಿವಣ್ಣಗೌಡರು ಬೋಧಿಸಿದರು. ಶಿಕ್ಷಕರಾದ ಶಿವಣ್ಣ, ಮಂಜುನಾಥ್ , ಗಿರೀಶ್, ನಾಗರಾಜ್ ಹಾಗೂ ಅಂಗನವಾಡಿ ಕಾರ್ಯಕರ್ತರಾದ ಭವ್ಯ, ಕಮಲಮ್ಮ ಅನೇಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು