2:11 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ

22/05/2021, 09:30

ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು .

ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರಿಗೆ ಆಹಾರ ಕಿಟ್  ನೀಡಿ ಅವರು ಮಾತನಾಡಿದರು.

ಕಳೆದ ಬಾರಿ ಕೊರೊನಾ ವಿಷಯದಲ್ಲಿ ನಾಗಮಂಗಲ ತಾಲ್ಲೂಕಿನಲ್ಲಿ ಮಾದರಿಯಾಗಿದ್ದು ಈ ಬಾರಿ ಹೆಚ್ಚು ಅತಿ ಹೆಚ್ಚು ಸೋಂಕಿತರ ಪ್ರಮಾಣ ಇದೆ. ಇದನ್ನು ತಡೆಯಲು ಅಧಿಕಾರಿಗಳು ಎಚ್ಚೆತ್ತು ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ಕೊಟ್ಟರು.

ತಾಲ್ಲೂಕಿನಲ್ಲಿ ರೈತರು ಬೆಳೆದ ತರಕಾರಿಗಳನ್ನು ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಮಾರಾಟ ಮಾಡಲು ಅವಕಾಶವಿದ್ದು, ಸಾಮಾಜಿಕ ಅಂತರ ಕಾಪಾಡಿ ಕೊಂಡು ಮಾರಾಟ ಮಾಡಬಹುದೆಂದು ತಿಳಿಸಿದರು ಕಳೆದ ಬಾರಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ನಾಗಮಂಗಲ ತಾಲ್ಲೂಕು ಮಾದರಿಯಾಗಿದ್ದುಈ ಬಾರಿಯೂ ಮುಕ್ತವಾಗಿಸಲು ಎಲ್ಲ ಅಧಿಕಾರಿಗಳು ಅತ್ಯಂತ ಕಾಳಜಿ ಪೂರ್ವಕವಾಗಿ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ , ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್, ವೈದ್ಯಾಧಿಕಾರಿ ಚೇತನ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಗಂಗಾಧರ್, ತಾಲ್ಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು