4:56 AM Saturday2 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ

22/05/2021, 09:30

ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು .

ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರಿಗೆ ಆಹಾರ ಕಿಟ್  ನೀಡಿ ಅವರು ಮಾತನಾಡಿದರು.

ಕಳೆದ ಬಾರಿ ಕೊರೊನಾ ವಿಷಯದಲ್ಲಿ ನಾಗಮಂಗಲ ತಾಲ್ಲೂಕಿನಲ್ಲಿ ಮಾದರಿಯಾಗಿದ್ದು ಈ ಬಾರಿ ಹೆಚ್ಚು ಅತಿ ಹೆಚ್ಚು ಸೋಂಕಿತರ ಪ್ರಮಾಣ ಇದೆ. ಇದನ್ನು ತಡೆಯಲು ಅಧಿಕಾರಿಗಳು ಎಚ್ಚೆತ್ತು ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ಕೊಟ್ಟರು.

ತಾಲ್ಲೂಕಿನಲ್ಲಿ ರೈತರು ಬೆಳೆದ ತರಕಾರಿಗಳನ್ನು ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಮಾರಾಟ ಮಾಡಲು ಅವಕಾಶವಿದ್ದು, ಸಾಮಾಜಿಕ ಅಂತರ ಕಾಪಾಡಿ ಕೊಂಡು ಮಾರಾಟ ಮಾಡಬಹುದೆಂದು ತಿಳಿಸಿದರು ಕಳೆದ ಬಾರಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ನಾಗಮಂಗಲ ತಾಲ್ಲೂಕು ಮಾದರಿಯಾಗಿದ್ದುಈ ಬಾರಿಯೂ ಮುಕ್ತವಾಗಿಸಲು ಎಲ್ಲ ಅಧಿಕಾರಿಗಳು ಅತ್ಯಂತ ಕಾಳಜಿ ಪೂರ್ವಕವಾಗಿ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ , ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್, ವೈದ್ಯಾಧಿಕಾರಿ ಚೇತನ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಗಂಗಾಧರ್, ತಾಲ್ಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು