4:29 AM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ

22/05/2021, 09:30

ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು .

ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರಿಗೆ ಆಹಾರ ಕಿಟ್  ನೀಡಿ ಅವರು ಮಾತನಾಡಿದರು.

ಕಳೆದ ಬಾರಿ ಕೊರೊನಾ ವಿಷಯದಲ್ಲಿ ನಾಗಮಂಗಲ ತಾಲ್ಲೂಕಿನಲ್ಲಿ ಮಾದರಿಯಾಗಿದ್ದು ಈ ಬಾರಿ ಹೆಚ್ಚು ಅತಿ ಹೆಚ್ಚು ಸೋಂಕಿತರ ಪ್ರಮಾಣ ಇದೆ. ಇದನ್ನು ತಡೆಯಲು ಅಧಿಕಾರಿಗಳು ಎಚ್ಚೆತ್ತು ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ಕೊಟ್ಟರು.

ತಾಲ್ಲೂಕಿನಲ್ಲಿ ರೈತರು ಬೆಳೆದ ತರಕಾರಿಗಳನ್ನು ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಮಾರಾಟ ಮಾಡಲು ಅವಕಾಶವಿದ್ದು, ಸಾಮಾಜಿಕ ಅಂತರ ಕಾಪಾಡಿ ಕೊಂಡು ಮಾರಾಟ ಮಾಡಬಹುದೆಂದು ತಿಳಿಸಿದರು ಕಳೆದ ಬಾರಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ನಾಗಮಂಗಲ ತಾಲ್ಲೂಕು ಮಾದರಿಯಾಗಿದ್ದುಈ ಬಾರಿಯೂ ಮುಕ್ತವಾಗಿಸಲು ಎಲ್ಲ ಅಧಿಕಾರಿಗಳು ಅತ್ಯಂತ ಕಾಳಜಿ ಪೂರ್ವಕವಾಗಿ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ , ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್, ವೈದ್ಯಾಧಿಕಾರಿ ಚೇತನ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಗಂಗಾಧರ್, ತಾಲ್ಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು