12:36 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ನಾಗಮಂಗಲ: ವಿದ್ಯುತ್ ಖಾಸಗೀಕರಣ, ಕೃಷಿ ಕಾಯ್ದೆ ರದ್ದತಿ ಆಗ್ರಹಿಸಿ ಫೆ. 3ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

25/01/2023, 18:23

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘದಿಂದ ಫೆಬ್ರವರಿ 3ರಂದು ನಾಗಮಂಗಲದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು
ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡಘಟ್ಟ ಸುರೇಶ್ ಹೇಳಿದರು.

ಅವರು ನಾಗಮಂಗಲ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವಿದ್ಯುತ್ ಖಾಸಗಿಕರಣ ರದ್ದತಿ, ಕೃಷಿ ಕಾಯಿದೆ ಮಾರಕವಾಗಿರುವ ಕಾಯಿದೆ ಸರ್ಕಾರ ಕೂಡಲೇ ರದ್ದುಪಡಿಸುವಂತೆ ಮತ್ತು ರಾಗಿ ಭತ್ತ ಕೊಬ್ಬರಿ ಖರೀದಿ ಕೇಂದ್ರವನ್ನ ಮತ್ತು ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಲು ಬೃಹತ್ ರೈತ ಪ್ರತಿಭಟನೆ ಮತ್ತು ಧರಣಿ ಯನ್ನು ಏರ್ಪಡಿಸಲಾಗಿದೆ.

ಸರ್ಕಾರವು ರೈತರಿಗೆ ಸಮರ್ಪಕವಾಗಿ ಇದುವರೆಗೂ ಬೆಲೆ ನಿಗದಿ ಮಾಡದೆ ಇರುವುದು ಹಾಲು, ಕೊಬ್ಬರಿ ಕನಿಷ್ಠ ದರ ನಿಗದಿ ಮಾಡದೇ ಇರುವುದು ರೈತರ ಸಂಕಷ್ಟ ಕೇಳುವರು ಇಲ್ಲದಂತಾಗಿದೆ. ಪ್ರತಿಯೊಬ್ಬ ರೈತರು ಮಳೆ ಅವಾಂತರದಿಂದಾಗಿ ಬೀದಿಗಳಿದು ಹೋರಾಟ ಮಾಡುವ ಸಂಭವವಾಗಿದ್ದು ಕೂಡಲೇ ಸರ್ಕಾರ ಕೃಷಿಗೆ ಸಂಬಂಧಪಟ್ಟಂತಹ ಮಾರಕವಾದ ಕಾಯ್ದೆಗಳನ್ನು ಕೈ ಬಿಟ್ಟು ರೈತರಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳುವ ಸಲುವಾಗಿ ಫೆಬ್ರವರಿ 3ರಂದು ನಾಗಮಂಗಲ ಟಿಬಿ ವೃತ್ತದಿಂದ ರೈತರ ಬೃಹತ್ ಮೆರವಣಿಗೆಯೊಂದಿಗೆ ಮಿನಿ ವಿಧಾನಸೌಧದ ಮೆರವಣಿಗೆ ಮಾಡಲಾಗಿದ್ದು ರೈತರ ಮನವಿಯನ್ನು ಸರ್ಕಾರಕ್ಕೆ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ)ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟೇಶ್, ಕಾರ್ಯಾಧ್ಯಕ್ಷ ಜಿ.ಟಿ.ಹರೀಶ್, ಉಪಾಧ್ಯಕ್ಷ ಕೆ.ಜೆ.ಯೋಗೇಶ್,
ಬೆಳ್ಳೂರು ಹೋಬಳಿ ಮಟ್ಟದ ಅಧ್ಯಕ್ಷ ಪಾಪಣ್ಣ, ಖಜಾಂಚಿ ಬೋರೇಗೌಡ, ಕಾರ್ಯದರ್ಶಿ ದೇವರಾಜ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು