5:50 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ನಾಗಮಂಗಲ: ವಿದ್ಯುತ್ ಖಾಸಗೀಕರಣ, ಕೃಷಿ ಕಾಯ್ದೆ ರದ್ದತಿ ಆಗ್ರಹಿಸಿ ಫೆ. 3ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

25/01/2023, 18:23

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘದಿಂದ ಫೆಬ್ರವರಿ 3ರಂದು ನಾಗಮಂಗಲದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು
ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡಘಟ್ಟ ಸುರೇಶ್ ಹೇಳಿದರು.

ಅವರು ನಾಗಮಂಗಲ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವಿದ್ಯುತ್ ಖಾಸಗಿಕರಣ ರದ್ದತಿ, ಕೃಷಿ ಕಾಯಿದೆ ಮಾರಕವಾಗಿರುವ ಕಾಯಿದೆ ಸರ್ಕಾರ ಕೂಡಲೇ ರದ್ದುಪಡಿಸುವಂತೆ ಮತ್ತು ರಾಗಿ ಭತ್ತ ಕೊಬ್ಬರಿ ಖರೀದಿ ಕೇಂದ್ರವನ್ನ ಮತ್ತು ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಲು ಬೃಹತ್ ರೈತ ಪ್ರತಿಭಟನೆ ಮತ್ತು ಧರಣಿ ಯನ್ನು ಏರ್ಪಡಿಸಲಾಗಿದೆ.

ಸರ್ಕಾರವು ರೈತರಿಗೆ ಸಮರ್ಪಕವಾಗಿ ಇದುವರೆಗೂ ಬೆಲೆ ನಿಗದಿ ಮಾಡದೆ ಇರುವುದು ಹಾಲು, ಕೊಬ್ಬರಿ ಕನಿಷ್ಠ ದರ ನಿಗದಿ ಮಾಡದೇ ಇರುವುದು ರೈತರ ಸಂಕಷ್ಟ ಕೇಳುವರು ಇಲ್ಲದಂತಾಗಿದೆ. ಪ್ರತಿಯೊಬ್ಬ ರೈತರು ಮಳೆ ಅವಾಂತರದಿಂದಾಗಿ ಬೀದಿಗಳಿದು ಹೋರಾಟ ಮಾಡುವ ಸಂಭವವಾಗಿದ್ದು ಕೂಡಲೇ ಸರ್ಕಾರ ಕೃಷಿಗೆ ಸಂಬಂಧಪಟ್ಟಂತಹ ಮಾರಕವಾದ ಕಾಯ್ದೆಗಳನ್ನು ಕೈ ಬಿಟ್ಟು ರೈತರಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳುವ ಸಲುವಾಗಿ ಫೆಬ್ರವರಿ 3ರಂದು ನಾಗಮಂಗಲ ಟಿಬಿ ವೃತ್ತದಿಂದ ರೈತರ ಬೃಹತ್ ಮೆರವಣಿಗೆಯೊಂದಿಗೆ ಮಿನಿ ವಿಧಾನಸೌಧದ ಮೆರವಣಿಗೆ ಮಾಡಲಾಗಿದ್ದು ರೈತರ ಮನವಿಯನ್ನು ಸರ್ಕಾರಕ್ಕೆ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ)ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟೇಶ್, ಕಾರ್ಯಾಧ್ಯಕ್ಷ ಜಿ.ಟಿ.ಹರೀಶ್, ಉಪಾಧ್ಯಕ್ಷ ಕೆ.ಜೆ.ಯೋಗೇಶ್,
ಬೆಳ್ಳೂರು ಹೋಬಳಿ ಮಟ್ಟದ ಅಧ್ಯಕ್ಷ ಪಾಪಣ್ಣ, ಖಜಾಂಚಿ ಬೋರೇಗೌಡ, ಕಾರ್ಯದರ್ಶಿ ದೇವರಾಜ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು