3:54 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ನಾಗಮಂಗಲ: ವಿದ್ಯುತ್ ಖಾಸಗೀಕರಣ, ಕೃಷಿ ಕಾಯ್ದೆ ರದ್ದತಿ ಆಗ್ರಹಿಸಿ ಫೆ. 3ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

25/01/2023, 18:23

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘದಿಂದ ಫೆಬ್ರವರಿ 3ರಂದು ನಾಗಮಂಗಲದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು
ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡಘಟ್ಟ ಸುರೇಶ್ ಹೇಳಿದರು.

ಅವರು ನಾಗಮಂಗಲ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವಿದ್ಯುತ್ ಖಾಸಗಿಕರಣ ರದ್ದತಿ, ಕೃಷಿ ಕಾಯಿದೆ ಮಾರಕವಾಗಿರುವ ಕಾಯಿದೆ ಸರ್ಕಾರ ಕೂಡಲೇ ರದ್ದುಪಡಿಸುವಂತೆ ಮತ್ತು ರಾಗಿ ಭತ್ತ ಕೊಬ್ಬರಿ ಖರೀದಿ ಕೇಂದ್ರವನ್ನ ಮತ್ತು ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಲು ಬೃಹತ್ ರೈತ ಪ್ರತಿಭಟನೆ ಮತ್ತು ಧರಣಿ ಯನ್ನು ಏರ್ಪಡಿಸಲಾಗಿದೆ.

ಸರ್ಕಾರವು ರೈತರಿಗೆ ಸಮರ್ಪಕವಾಗಿ ಇದುವರೆಗೂ ಬೆಲೆ ನಿಗದಿ ಮಾಡದೆ ಇರುವುದು ಹಾಲು, ಕೊಬ್ಬರಿ ಕನಿಷ್ಠ ದರ ನಿಗದಿ ಮಾಡದೇ ಇರುವುದು ರೈತರ ಸಂಕಷ್ಟ ಕೇಳುವರು ಇಲ್ಲದಂತಾಗಿದೆ. ಪ್ರತಿಯೊಬ್ಬ ರೈತರು ಮಳೆ ಅವಾಂತರದಿಂದಾಗಿ ಬೀದಿಗಳಿದು ಹೋರಾಟ ಮಾಡುವ ಸಂಭವವಾಗಿದ್ದು ಕೂಡಲೇ ಸರ್ಕಾರ ಕೃಷಿಗೆ ಸಂಬಂಧಪಟ್ಟಂತಹ ಮಾರಕವಾದ ಕಾಯ್ದೆಗಳನ್ನು ಕೈ ಬಿಟ್ಟು ರೈತರಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳುವ ಸಲುವಾಗಿ ಫೆಬ್ರವರಿ 3ರಂದು ನಾಗಮಂಗಲ ಟಿಬಿ ವೃತ್ತದಿಂದ ರೈತರ ಬೃಹತ್ ಮೆರವಣಿಗೆಯೊಂದಿಗೆ ಮಿನಿ ವಿಧಾನಸೌಧದ ಮೆರವಣಿಗೆ ಮಾಡಲಾಗಿದ್ದು ರೈತರ ಮನವಿಯನ್ನು ಸರ್ಕಾರಕ್ಕೆ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ)ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟೇಶ್, ಕಾರ್ಯಾಧ್ಯಕ್ಷ ಜಿ.ಟಿ.ಹರೀಶ್, ಉಪಾಧ್ಯಕ್ಷ ಕೆ.ಜೆ.ಯೋಗೇಶ್,
ಬೆಳ್ಳೂರು ಹೋಬಳಿ ಮಟ್ಟದ ಅಧ್ಯಕ್ಷ ಪಾಪಣ್ಣ, ಖಜಾಂಚಿ ಬೋರೇಗೌಡ, ಕಾರ್ಯದರ್ಶಿ ದೇವರಾಜ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು