9:00 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಸಂಭ್ರಮದ ಮಹರ್ಷಿ ಭಗೀರಥ ಜಯಂತೋತ್ಸವ

08/05/2022, 20:27

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ಮಹರ್ಷಿ ಭಗೀರಥ ರವರ ಮನುಕುಲದ ಕಥೆ ಇಂದಿಗೂ ಇತಿಹಾಸದಲ್ಲಿ ಮತ್ತೆ ಮತ್ತೆ ನೆನಪಿನಲ್ಲಿ ಉಳಿಯುತ್ತದೆ. ಮನುಕುಲದ ಮಾನವತಾವಾದಿಯಾಗಿ ಮನೆಮಾತಾಗಿರುವ ಭಗೀರಥ ರನ್ನು ನೆನಪಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಸುರೇಶ್ ಗೌಡ ಹೇಳಿದರು.

ಅವರಿಂದು ನಾಗಮಂಗಲ ಮಿನಿವಿಧಾನ ಸೌಧದಲ್ಲಿ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಮಹರ್ಷಿ ಭಗೀರಥ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಅವರು ಉದ್ಘಾಟಿಸಿದರು.

ಭಗೀರಥ ಮಹರ್ಷಿಗಳು ಭೂಮಿಗೆ ಗಂಗೆಯನ್ನು ತರಲು ಮಾಡಿದ ಪ್ರಯತ್ನ ಅಡೆತಡೆಗಳನ್ನು ನಿಭಾಯಿಸಲು ಮಾಡಿದ ಶ್ರಮವನ್ನು ಸ್ಮರಿಸಿದರು.

ಅಂದು ಭಗೀರಥ ನೀರು ತರಲು ಮಾಡಿದ ಶ್ರಮ ಇಂದೂ ಸಹ ನಾವು ನೀರಿಗಾಗಿ ಹೋರಾಡುತ್ತಿದ್ದೇವೆ ಎಂದರು.

ಸಮಾಜದ ಸಮುದಾಯದ ಬಂಧುಗಳು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಉಪ್ಪಾರ ಸಮಾಜದ ಹಾಗೂ ಸಂಘಟನೆಗಳ ಮುಖಂಡರು ಬಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉಪ್ಪಾರ ಸಮಾಜದ ಸಾಧಕರಿಗೆ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು