11:35 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಸಂಭ್ರಮದ ಮಹರ್ಷಿ ಭಗೀರಥ ಜಯಂತೋತ್ಸವ

08/05/2022, 20:27

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ಮಹರ್ಷಿ ಭಗೀರಥ ರವರ ಮನುಕುಲದ ಕಥೆ ಇಂದಿಗೂ ಇತಿಹಾಸದಲ್ಲಿ ಮತ್ತೆ ಮತ್ತೆ ನೆನಪಿನಲ್ಲಿ ಉಳಿಯುತ್ತದೆ. ಮನುಕುಲದ ಮಾನವತಾವಾದಿಯಾಗಿ ಮನೆಮಾತಾಗಿರುವ ಭಗೀರಥ ರನ್ನು ನೆನಪಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಸುರೇಶ್ ಗೌಡ ಹೇಳಿದರು.

ಅವರಿಂದು ನಾಗಮಂಗಲ ಮಿನಿವಿಧಾನ ಸೌಧದಲ್ಲಿ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಮಹರ್ಷಿ ಭಗೀರಥ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಅವರು ಉದ್ಘಾಟಿಸಿದರು.

ಭಗೀರಥ ಮಹರ್ಷಿಗಳು ಭೂಮಿಗೆ ಗಂಗೆಯನ್ನು ತರಲು ಮಾಡಿದ ಪ್ರಯತ್ನ ಅಡೆತಡೆಗಳನ್ನು ನಿಭಾಯಿಸಲು ಮಾಡಿದ ಶ್ರಮವನ್ನು ಸ್ಮರಿಸಿದರು.

ಅಂದು ಭಗೀರಥ ನೀರು ತರಲು ಮಾಡಿದ ಶ್ರಮ ಇಂದೂ ಸಹ ನಾವು ನೀರಿಗಾಗಿ ಹೋರಾಡುತ್ತಿದ್ದೇವೆ ಎಂದರು.

ಸಮಾಜದ ಸಮುದಾಯದ ಬಂಧುಗಳು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಉಪ್ಪಾರ ಸಮಾಜದ ಹಾಗೂ ಸಂಘಟನೆಗಳ ಮುಖಂಡರು ಬಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉಪ್ಪಾರ ಸಮಾಜದ ಸಾಧಕರಿಗೆ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು