2:02 PM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

05/09/2024, 21:15

ಸಂತೋಷ್ ಹಳ್ಳೂರ ಬೆಳಗಾವಿ

info.reporterkarnataka@gmail.com

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮೂಡಲಗಿಯ ಆಶ್ರಯದಲ್ಲಿ ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಗತಿಪರ ರೈತರಾದ ಅಲ್ಲ ಗೌಡ ಪಾಟೀಲ್ ಅವರು ಕಬ್ಬಿನ ಸಸಿಗಳ ತಯಾರಿ ಬಗ್ಗೆ ಸಸಿ ನಾಟಿ ಮಾಡುವ ವಿಧಾನಗಳ ಬಗ್ಗೆ ಬಿಜೋಪಚಾರ ಮಾಡುವ ವಿಧಾನಗಳ ಬಗ್ಗೆ ರೋಗಗಳ ಹತೋಟಿ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೃಷಿ ಮೇಲ್ವಿಚಾರಕರಾದ ಮೈಲಾರಪ್ಪ ಪೈಲಿ ಅವರು ಪ್ರಸ್ತಾವಿಕವಾಗಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಉಪಾಧ್ಯಕ್ಷರಾದ ಶಿವಲೀಲಾ ಸಬರದ, ಒಕ್ಕೂಟದ ಪದಾಧಿಕಾರಿಗಳಾದ ಲಕ್ಷ್ಮಿ ಮಾಯಣ್ಣವರ್, ಸ್ವ ಸಹಾಯ ಸಂಘಗಳ ಸದಸ್ಯರು ರೈತ ಬಾಂಧವರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಯಾದ ಮದಿನಾ ನಾಯಿಕವಾಡಿ ಕಾರ್ಯಕ್ರಮ ಸ್ವಾಗತಿಸಿದರು. ಕವಿತಾ ದಿನ್ನಿಮನಿ. ನಿರೂಪಿಸಿದರು, ಲಕ್ಷ್ಮಿ ಆಸೀರೊಟ್ಟಿ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು