10:59 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ನಂಜನಗೂಡು ತಾಲೂಕು ನಾಯಕರ ಸಂಘದಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ

07/05/2024, 21:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ನಗರದ ಗೌರಿಘಟ್ಟ ಬೀದಿಯಲ್ಲಿರುವ ನಾಯಕರ ಭವನದಲ್ಲಿ ತಾಲ್ಲೂಕು ನಾಯಕರ ಸಂಘದಿಂದ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.


ಶ್ರೀ ನಿವಾಸ್ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನಾಚರಣೆ ಮಾಡಲಾಯಿತು.
ಬಳಿಕ ತಾಲ್ಲೂಕು ನಾಯಕರ ಸಂಘದ ಗೌರವಾಧ್ಯಕ್ಷ ಹಾಗೂ ಮಾಜಿ ಜಿ.ಪಂ ಸದಸ್ಯ ಸಿ. ಚಿಕ್ಕರಂಗನಾಯಕ ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರು ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಮಾಜಿಕ ಹರಿಕಾರ, ಚಿಂತಕ, ಸಾಮಾಜಿಕ ಸುಧಾರಕ ಎಂದರೆ ತಪ್ಪಾಗಲಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದರು ಸಾಮಾಜಿಕ ನ್ಯಾಯಕ್ಕೆ ದುಡಿದು ಮೊಟ್ಟಮೊದಲ ಬಾರಿಗೆ ನಂಜನಗೂಡಿನ ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಅಧ್ಯಕ್ಷರಾಗುವ ಅವಕಾಶ ಕಲ್ಪಿಸಿದ್ದರು. ಹೇಳಿದ ಕೆಲಸವನ್ನು ಚಾಚು ತಪ್ಪದೇ ಮಾಡುತ್ತಿದ್ದರು. ತಳ ಸಮುದಾಯಕ್ಕೆ ಮೊದಲ ಆದ್ಯತೆ ನೀಡಿ ಪ್ರತಿ ಸಮುದಾಯಕ್ಕೂ ನಂಜನಗೂಡಿನಲ್ಲಿ ಭವನ ನಿರ್ಮಾಣ ಮಾಡಲು ಸ್ಥಳವಕಾಶ ಮಾಡಿಕೊಟ್ಟು ನಿವೇಶನಗಳನ್ನು ನೀಡಿದ್ದಾರೆ. ಬುದ್ಧ ಬಸವ ಅಂಬೇಡ್ಕರ್ ಅವರ ಅನುಯಾಯಿಯಾಗಿ ಆದರ್ಶವನ್ನು ರೂಪಿಸಿಕೊಂಡಿದ್ದರು. ಅವರು ನಮ್ಮೊಟ್ಟಿಗೆ ಇಲ್ಲದಿದ್ದರೂ ಅವರು ಬದುಕಿದ ಬದುಕು ಇನ್ನು ಜೀವಂತವಾಗಿದೆ ಎಂದು ಸ್ಮರಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ನಾಯಕರ ಸಂಘದ ಅಧ್ಯಕ್ಷ ಬಂಗಾರಸ್ವಾಮಿ, ಖಜಾಂಚಿ ರಂಗಸ್ವಾಮಿ, ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ಮುಖಂಡ ಕುಂಬ್ರಹಳ್ಳಿ ಸುಬ್ಬಣ್ಣ, ಕಾಂಗ್ರೆಸ್ ಮುಖಂಡ ದೊರೆಸ್ವಾಮಿ ನಾಯಕ, ಮುಖಂಡರಾದ ಹಳ್ಳದಕೇರಿ ನಾಗರಾಜು, ಹೆಡತಲೆ ನಾಗರಾಜು, ಬಿಜೆಪಿ ಎಸ್ಟಿ ಮೋರ್ಚಾ ನಗರಾಧ್ಯಕ್ಷ ಸುದೇಂದ್ರ ಕುಮಾರ್, ಮಾಜಿ ತಾಪಂ ಸದಸ್ಯರಾದ ಕೆ.ಡಿ ಮಂಜು, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು