11:10 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ನಂಜನಗೂಡು ತಾಲೂಕು ನಾಯಕರ ಸಂಘದಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ

07/05/2024, 21:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ನಗರದ ಗೌರಿಘಟ್ಟ ಬೀದಿಯಲ್ಲಿರುವ ನಾಯಕರ ಭವನದಲ್ಲಿ ತಾಲ್ಲೂಕು ನಾಯಕರ ಸಂಘದಿಂದ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.


ಶ್ರೀ ನಿವಾಸ್ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನಾಚರಣೆ ಮಾಡಲಾಯಿತು.
ಬಳಿಕ ತಾಲ್ಲೂಕು ನಾಯಕರ ಸಂಘದ ಗೌರವಾಧ್ಯಕ್ಷ ಹಾಗೂ ಮಾಜಿ ಜಿ.ಪಂ ಸದಸ್ಯ ಸಿ. ಚಿಕ್ಕರಂಗನಾಯಕ ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರು ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಮಾಜಿಕ ಹರಿಕಾರ, ಚಿಂತಕ, ಸಾಮಾಜಿಕ ಸುಧಾರಕ ಎಂದರೆ ತಪ್ಪಾಗಲಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದರು ಸಾಮಾಜಿಕ ನ್ಯಾಯಕ್ಕೆ ದುಡಿದು ಮೊಟ್ಟಮೊದಲ ಬಾರಿಗೆ ನಂಜನಗೂಡಿನ ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಅಧ್ಯಕ್ಷರಾಗುವ ಅವಕಾಶ ಕಲ್ಪಿಸಿದ್ದರು. ಹೇಳಿದ ಕೆಲಸವನ್ನು ಚಾಚು ತಪ್ಪದೇ ಮಾಡುತ್ತಿದ್ದರು. ತಳ ಸಮುದಾಯಕ್ಕೆ ಮೊದಲ ಆದ್ಯತೆ ನೀಡಿ ಪ್ರತಿ ಸಮುದಾಯಕ್ಕೂ ನಂಜನಗೂಡಿನಲ್ಲಿ ಭವನ ನಿರ್ಮಾಣ ಮಾಡಲು ಸ್ಥಳವಕಾಶ ಮಾಡಿಕೊಟ್ಟು ನಿವೇಶನಗಳನ್ನು ನೀಡಿದ್ದಾರೆ. ಬುದ್ಧ ಬಸವ ಅಂಬೇಡ್ಕರ್ ಅವರ ಅನುಯಾಯಿಯಾಗಿ ಆದರ್ಶವನ್ನು ರೂಪಿಸಿಕೊಂಡಿದ್ದರು. ಅವರು ನಮ್ಮೊಟ್ಟಿಗೆ ಇಲ್ಲದಿದ್ದರೂ ಅವರು ಬದುಕಿದ ಬದುಕು ಇನ್ನು ಜೀವಂತವಾಗಿದೆ ಎಂದು ಸ್ಮರಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ನಾಯಕರ ಸಂಘದ ಅಧ್ಯಕ್ಷ ಬಂಗಾರಸ್ವಾಮಿ, ಖಜಾಂಚಿ ರಂಗಸ್ವಾಮಿ, ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ಮುಖಂಡ ಕುಂಬ್ರಹಳ್ಳಿ ಸುಬ್ಬಣ್ಣ, ಕಾಂಗ್ರೆಸ್ ಮುಖಂಡ ದೊರೆಸ್ವಾಮಿ ನಾಯಕ, ಮುಖಂಡರಾದ ಹಳ್ಳದಕೇರಿ ನಾಗರಾಜು, ಹೆಡತಲೆ ನಾಗರಾಜು, ಬಿಜೆಪಿ ಎಸ್ಟಿ ಮೋರ್ಚಾ ನಗರಾಧ್ಯಕ್ಷ ಸುದೇಂದ್ರ ಕುಮಾರ್, ಮಾಜಿ ತಾಪಂ ಸದಸ್ಯರಾದ ಕೆ.ಡಿ ಮಂಜು, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು