12:41 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಂಜನಗೂಡು ತಾಲೂಕು ನಾಯಕರ ಸಂಘದಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ

07/05/2024, 21:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ನಗರದ ಗೌರಿಘಟ್ಟ ಬೀದಿಯಲ್ಲಿರುವ ನಾಯಕರ ಭವನದಲ್ಲಿ ತಾಲ್ಲೂಕು ನಾಯಕರ ಸಂಘದಿಂದ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.


ಶ್ರೀ ನಿವಾಸ್ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನಾಚರಣೆ ಮಾಡಲಾಯಿತು.
ಬಳಿಕ ತಾಲ್ಲೂಕು ನಾಯಕರ ಸಂಘದ ಗೌರವಾಧ್ಯಕ್ಷ ಹಾಗೂ ಮಾಜಿ ಜಿ.ಪಂ ಸದಸ್ಯ ಸಿ. ಚಿಕ್ಕರಂಗನಾಯಕ ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರು ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಮಾಜಿಕ ಹರಿಕಾರ, ಚಿಂತಕ, ಸಾಮಾಜಿಕ ಸುಧಾರಕ ಎಂದರೆ ತಪ್ಪಾಗಲಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದರು ಸಾಮಾಜಿಕ ನ್ಯಾಯಕ್ಕೆ ದುಡಿದು ಮೊಟ್ಟಮೊದಲ ಬಾರಿಗೆ ನಂಜನಗೂಡಿನ ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಅಧ್ಯಕ್ಷರಾಗುವ ಅವಕಾಶ ಕಲ್ಪಿಸಿದ್ದರು. ಹೇಳಿದ ಕೆಲಸವನ್ನು ಚಾಚು ತಪ್ಪದೇ ಮಾಡುತ್ತಿದ್ದರು. ತಳ ಸಮುದಾಯಕ್ಕೆ ಮೊದಲ ಆದ್ಯತೆ ನೀಡಿ ಪ್ರತಿ ಸಮುದಾಯಕ್ಕೂ ನಂಜನಗೂಡಿನಲ್ಲಿ ಭವನ ನಿರ್ಮಾಣ ಮಾಡಲು ಸ್ಥಳವಕಾಶ ಮಾಡಿಕೊಟ್ಟು ನಿವೇಶನಗಳನ್ನು ನೀಡಿದ್ದಾರೆ. ಬುದ್ಧ ಬಸವ ಅಂಬೇಡ್ಕರ್ ಅವರ ಅನುಯಾಯಿಯಾಗಿ ಆದರ್ಶವನ್ನು ರೂಪಿಸಿಕೊಂಡಿದ್ದರು. ಅವರು ನಮ್ಮೊಟ್ಟಿಗೆ ಇಲ್ಲದಿದ್ದರೂ ಅವರು ಬದುಕಿದ ಬದುಕು ಇನ್ನು ಜೀವಂತವಾಗಿದೆ ಎಂದು ಸ್ಮರಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ನಾಯಕರ ಸಂಘದ ಅಧ್ಯಕ್ಷ ಬಂಗಾರಸ್ವಾಮಿ, ಖಜಾಂಚಿ ರಂಗಸ್ವಾಮಿ, ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ಮುಖಂಡ ಕುಂಬ್ರಹಳ್ಳಿ ಸುಬ್ಬಣ್ಣ, ಕಾಂಗ್ರೆಸ್ ಮುಖಂಡ ದೊರೆಸ್ವಾಮಿ ನಾಯಕ, ಮುಖಂಡರಾದ ಹಳ್ಳದಕೇರಿ ನಾಗರಾಜು, ಹೆಡತಲೆ ನಾಗರಾಜು, ಬಿಜೆಪಿ ಎಸ್ಟಿ ಮೋರ್ಚಾ ನಗರಾಧ್ಯಕ್ಷ ಸುದೇಂದ್ರ ಕುಮಾರ್, ಮಾಜಿ ತಾಪಂ ಸದಸ್ಯರಾದ ಕೆ.ಡಿ ಮಂಜು, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು