3:49 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ನಾಳೆ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ ಪಾಪ್ಯುಲರ್ ಫ್ರಂಟ್

26/09/2021, 21:39

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದರೂ, ಒಕ್ಕೂಟ ಸರ್ಕಾರವು ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ ಮತ್ತು ಪ್ರತಿಭಟನೆಯನ್ನು ದಮನಿಸುವ ಪಿತೂರಿಗಳನ್ನು ನಡೆಸುತ್ತಿದೆ. ಆದರೂ ಧೃತಿಗೆಡದ ರೈತರು ಎಲ್ಲಾ ಸಂಕಷ್ಟಗಳನ್ನು ಎದುರಿಸಿಕೊಂಡು ಪ್ರತಿಭಟನೆಯನ್ನು ಮುಂದುವರಿಸಿರುವುದು ಆಶಾದಾಯಕವಾಗಿದೆ.

ಕಾರ್ಪೋರೇಟ್ ಕುಳಗಳಿಗಷ್ಟೇ ಅಪಾರ ಲಾಭ ತಂದು ಕೊಡುವ ಕರಾಳ ಕೃಷಿ ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ಒಟ್ಟು ದೇಶಕ್ಕೆ ಮಾರಕವಾಗಿದೆ. ಈ ನಿಟ್ಟಿನಲ್ಲಿ, ದೇಶದ ಜೀವಾಳವಾಗಿರುವ ಕೃಷಿಕ ವರ್ಗವು ಮಳೆ ಬಿಸಿಲನ್ನು ಲೆಕ್ಕಿಸದೇ ಮುನ್ನಡೆಸುತ್ತಿರುವ ಹೋರಾಟದೊಂದಿಗೆ ಕೈಜೋಡಿಸುವುದು ಪ್ರತಿಯೋರ್ವ ನಾಗರಿಕನ ಹೊಣೆಗಾರಿಕೆಯಾಗಿರುತ್ತದೆ. ಒಕ್ಕೂಟ ಸರಕಾರದ ಜನವಿರೋಧಿ, ಕೃಷಿಕ ವಿರೋಧಿ ನೀತಿಗಳ ವಿರುದ್ಧ ನಡೆಯುವ ರೈತರ ಎಲ್ಲಾ ರೀತಿಯ ಹೋರಾಟಗಳೊಂದಿಗೆ ಪಾಪ್ಯುಲರ್ ಫ್ರಂಟ್ ಐಕಮತ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಯಾಸಿರ್ ಹಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು