3:57 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ನಾನೂ ಹಳ್ಳಿ ಸರಕಾರಿ ಶಾಲೆಯ ವಿದ್ಯಾರ್ಥಿ, ಮಕ್ಕಳ ಉತ್ತಮ ಭವಿಷ್ಯಕ್ಕೆ ಶಿಕ್ಷಕರು ಬುನಾದಿ ಹಾಕಬೇಕು: ಶಾಸಕ ಡಾ.ಎನ್.ಟಿ.ಶ್ರೀನಿವಾಸ್

28/11/2024, 15:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ನಾನೂ ನಮ್ಮೂರಾದ ನರಸಿಂಹಗಿರಿ ಹಳ್ಳಿಯ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದೆ, ಸರ್ಕಾರಿ ಶಾಲೆಯನ್ನು ಯಾರೂ ಯಾವುದೇ ಕಾರಣಕ್ಕೆ ಜರಿಯ ಬಾರದು ಎಂದು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ತಮ್ಮ ಬಾಲ್ಯದ ಸವಿ ಸವಿ ನೆನಪುಗಳ ಬುತ್ತಿ ಬಿಚ್ಚಿಟ್ಟರು.


ಅವರು ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿಗಳ ಸಮನ್ವಯ ವೇದಿಕೆ ಆಯೋಜಿಸಿದ್ದ, ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕರು ದೇಶಕ್ಕೆ ಭವಿಷ್ಯದ ಸತ್ಪ್ರಜೆಗಳನ್ನು ನೀಡೋ ಹೊಣೆ ಹೊಂದಿದ್ದಾರೆ. ಆದ್ಧರಿಂದ ಅವರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಶಿಸ್ಥು ಸಂಸ್ಕಾರಗಳನ್ನು ನೀಡಿ, ಅವರ ಉತ್ತಮ ಭವಿಷ್ಯಕ್ಕಾಗಿ ಭದ್ರ ಬುನಾದಿ ಹಾಕುಬೇಕಿದೆ ಎಂದರು.
ಅವರು ಇದಕ್ಕೂ ಮೊದಲು
ಭಾರತದ ಸಂವಿಧಾನದ ದಿನದ ಪ್ರಯುಕ್ತ, ವೇದಿಕೆಯ ಮುಂಭಾಗದಲ್ಲಿ ನಿರ್ಮಿಸಲಾಗಿದ್ದ. ಸಂವಿಧಾನ ಶಿಲ್ಪಿ ಡಾ॥ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಮಿಸಿದರು. ಮತ್ತು ಭಾರತಕ್ಕೆ ಅಂಬೇಡ್ಕರ್ ರವರ ಕೊಡುಗೆ, ಹಾಗೂ ಸಂವಿಧಾನ ಕುರಿತು ಮಾತನಾಡಿದರು. ಭಾರತೀಯ ನಾಗರಿಕರಿಗೆ ಹಕ್ಕುಗಳನ್ನು, ಹಾಗೂ ಕಾನೂನುಗಳನ್ನು ವಿವರಿಸುವ ದಾಖಲೆ ತೋರಿಸುವಲ್ಲಿ. ಬಾಬಾ ಸಾಹೇಬರವರು ಬಹುದೊಡ್ಡ ಪಾತ್ರವನ್ನು ವಹಿಸಿದ್ದಾರೆ, ಅವರ ಶ್ರಮದಾನದ ಫಲ ಸಂವಿಧಾನವಾಗಿದೆ. ಅಂತಹ ಅಮೂಲ್ಯವಾದ ಕೊಡುಗೆಯನ್ನು ದೇಶಕ್ಕೆ ನೀಡಿರುವ ದಿನವಾಗಿದ್ದು, ಇಂದು ಬಾಬಾ ಸಾಹೇಬರ ಕೊಡುಗೆಯನ್ನು ದೇಶ ಸ್ಮರಿಸುತ್ತಿದೆ ಎಂದರು.
ಎಸ್ ಡಿಎಂಸಿಯವರು ಹಾಗೂ ಶಿಕ್ಷಕರು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕಿದೆ, ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಗುಣಮಟ್ಟದ ಶಿಕ್ಷಣ ನೀಡವಲ್ಲಿ ಆಧ್ಯತೆ ನೀಡಬೇಕಿದೆ.
ವಿದ್ಯಾರ್ಥಿಗಳು ಶಿಕ್ಷಕರನ್ನು ಅನುಕರಿಸುತ್ತಾರೆ, ಆದ್ದರಿಂದಾಗಿ ಶಿಕ್ಷಕರು ಆದರ್ಶ ಗುಣಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ನಾನು ಕೂಡ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಓದಿದವನು, ಅದಕ್ಕಾಗಿ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಪರಿಚಯವಿದೆ. ಈ ಮೊದಲು ಶಿಕ್ಷಣ ಕೇವಲ ಕಲಿಕೆಗೆ ಮಾತ್ರ ಸೀಮಿತವಾಗಿತ್ತು, ಜಾಗತೀಕರಣದ ನಂತರ ಪ್ರತಿಯೊಬ್ಬ ವ್ಯಕ್ತಿಯೂ ವಿಶ್ವಮಾನವನಾಗಿ ಬೆಳೆಯಬಹುದಾಗಿದೆ. ಪೋಷಕಾಂಶಯುಕ್ತ ಉತ್ತಮ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ, ಇತ್ಯಾದಿ ಪೂರಕ ಅಂಶಗಳನ್ನು ಒದಗಿಸುವ ಕೆಲಸ ಸರ್ಕಾರ ಮಾಡುತ್ತಿದೆ. ನಾಡಿಗೆ ಸತ್ಪ್ರಜೆಗಳನ್ನು ನೀಡೋ ಬಹು ದೊಡ್ಡ ಜವಾಬ್ದಾರಿ, ಪೋಷಕರ ಶಿಕ್ಷಕರ SDMC ಯವರ ಮತ್ತು ನಮ್ಮೆಲ್ಲರ ಮೇಲಿದೆ ಎಂದರು. ವೇದಿಕೆಯಲ್ಲಿ SDMC ಸಮನ್ವಯ ಸಮಿತಿ ರಾಜ್ಯಾದ್ಯಕ್ಷರಾದ ಉಮೇಶ್ ಜಿ ಗಂಗವಾಡಿ, SDMC ಸಮನ್ವಯ ಸಮಿತಿ ರಾಜ್ಯ ಉಪಾಧ್ಯಕ್ಷ ಗುನ್ನಳ್ಳಿ ರಾಘವೇಂದ್ರ. ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಕರ್ಣಂ. SDMC ಸಮನ್ವಯ ಸಮಿತಿಯ ರಾಜ್ಯ ಜಿಲ್ಲಾ ತಾಲೂಕು ಘಟಕಗಳ ಮುಖಂಡರು, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಶುಕೂರ್, ರಾಜ್ಯ ಕಾರ್ಯದರ್ಶಿ ಜಿ.ಎಸ್.ಪಾರ್ವತಿ, ರಾಜ್ಯ ಖಜಾಂಚಿ ಜ್ಯೋತಿ ರಾಮಶೆಟ್ಟಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ವೆಂಕಟೇಶ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಜಿ.ಕೊಟ್ರಗೌಡ, SDMC ಸಮನ್ವಯ ಸಮಿತಿ ಕೂಡ್ಲಿಗಿ ತಾಲೂಕಾಧ್ಯಕ್ಷರಾದ ಟಿ.ಭಾಗ್ಯ, ಹೂವಿನಹಡಗಲಿ ಸಮಿತಿಯ ಅಧ್ಯಕ್ಷರಾದ ಎಸ್.ಯಶೋಧ,
ಬಿಇಒ ಪದ್ಮನಾಭ ಕರಣಂ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಶಿಕ್ಷಣ ಇಲಾಖಾಧಿಕಾರಿಗಳು, ತಾಲೂಕಿನ ವಿವಿಧೆಡೆಯ ಶಿಕ್ಷಕರು. SDMC ಸಮನ್ವಯ ಸಮಿತಿಯ ಕೂಡ್ಲಿಗಿ ತಾಲೂಕು, ಹಾಗೂ ನೆರೆ ಹೊರೆ ತಾಲೂಕು ಸಮತಿಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು