8:42 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಾನು ಸೋತಿರಬಹುದು ಸತ್ತಿಲ್ಲ, ಕ್ಷೇತ್ರದ ಅಭಿವೃದ್ಧಿಗಾಗಿ ಕೈ ತೊರೆದು ಕಮಲ ಹಿಡಿದಿದ್ದೆ: ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್

10/10/2023, 21:29

ಹಾವೇರಿ(reporterkarnataka.com): ನಾನು ಸೋತಿರಬಹುದು ಸತ್ತಿಲ್ಲ: ಸೋತರು ಗೆದ್ದರೂ ಜನರ ನಡುವೆ ಇದ್ದು ಅವರ ಸಮಸ್ಯೆಗಳನ್ನು ಅರಿತು ಕೆಲಸ ಮಾಡುವುದನ್ನು ಬಿಡುವುದಿಲ್ಲ ಎಂದು ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಹಿರೇಮಾದಾಪುರ ಗ್ರಾಮದ ಬಳಿ ಕುಮದ್ವತಿ ನದಿಗೆ ತಮ್ಮ ಅವಧಿಯಲ್ಲಿ 17 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಬಾಂದರ್ (ಬ್ಯಾರೇಜ್ ) ಕಂ ಸೇತುವೆ ವೀಕ್ಷಣೆ ಮಾಡಿ, ಬಳಿಕ ರೈತರು ಸಣ್ಣಗುಬ್ಬಿ ಗ್ರಾಮದ ರೈತ ದೇವರಾಜ್ ನಾಗಣ್ಣನವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ ಅವರು ಮಾತನಾಡಿದರು.


ತಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಿದ್ದು ಕ್ಷೇತ್ರದ ಅಭಿವೃದ್ಧಿಗಾಗಿ. ತಮಗೆ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ ತೃಪ್ತಿ ತಂದಿದೆ. ನಾನು ಈ ಬಾರಿ ಸೋತಿರಬಹುದು. ಸೋತರು ನಾನು ಕೆಲಸ ಮಾಡುವುದನ್ನು ಬಿಡುವುದಿಲ್ಲ. ನನ್ನ ರಕ್ತ ಇರುವವರೆಗೂ ಕ್ಷೇತ್ರದಲ್ಲಿ ಜನರ ಸೇವೆ ಮಾಡುವುದು ನಿಲ್ಲಿಸಲ್ಲ ಎಂದು ಬಿ.ಸಿ ಪಾಟೀಲ್ ಅವರು ಹಲವಾರು ವಿಷಯಗಳ ಕುರಿತು ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು