9:35 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ನಾನು ಯಾವುದೇ ತಪ್ಪು ಮಾಡಿಲ್ಲ, ದೇವರ‌ ದಯೆ ನನ್ನ ಮೇಲಿದೆ: ಸಚಿವೆ ಶಶಿಕಲಾ ಜೊಲ್ಲೆ 

16/08/2021, 17:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನನ್ನ ಮೇಲಿನ ಆರೋಪ ಬಗ್ಗೆ ನಾನು ಗಮನ ಕೊಟ್ಟಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡುವ ಪರಿಸ್ಥಿತಿಯೂ ನನಗಿಲ್ಲ. ದೇವರ‌ ದಯೆ ನನ್ನ ಮೇಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬುದ್ಧಿಮಾಂದ್ಯ ನನ್ನ ಮಗುವಿಗಾಗಿ ಈ ಸಮಾಜ ಸೇವೆ ಕ್ಷೇತ್ರಕ್ಕೆ ಬಂದಿದ್ದೇನೆ. ಆ ಮಗುವಿನ ನೋವನ್ನ ತಾಯಿಯಾಗಿ ಅನುಭವಿಸಿದ್ದೇನೆ. ಯಾರೋ ಏನೋ ಅಪಾದನೆ ಮಾಡಿದರೆ ಅದನ್ನ ಬೇಜಾರು ಮಾಡಿಕೊಳ್ಳದೇ ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಅವರು ನುಡಿದರು.

ಸಚಿವ ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ನನ್ನ ಮೇಲೆ ಆಪಾದನೆ ಮಾಡಿರಬಹುದು. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಕುರಿತು ಸಾಕ್ಷಾಧಾರ ಇಲ್ಲ. ಹಾಗಾಗಿ ಯಾರ ಮೇಲೂ ಆರೋಪ ಮಾಡುವುದಿಲ್ಲ. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೋ ಅವರು ಅನುಭವಿಸುತ್ತಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಏನಾದ್ರೂ ಷಡ್ಯಂತ್ರ ಮಾಡಿದ್ದರೆ ದೇವರು ನೋಡಿಕೊಳ್ಳುತ್ತಾನೆ. ಬಡವರ ಕಣ್ಣೀರು ಒರೆಸಿದ ಆಶೀರ್ವಾದ ನನ್ನ ಜತೆ ಇದೆ.

ಇದೇ ಕಾರಣಕ್ಕಾಗಿ ಎರಡನೇ ಬಾರಿ ಸಚಿವೆಯಾಗಿ ಅಧಿಕಾರವಹಿಸಿಕೊಂಡಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು