3:57 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ನಾನು ಯಾವುದೇ ತಪ್ಪು ಮಾಡಿಲ್ಲ, ದೇವರ‌ ದಯೆ ನನ್ನ ಮೇಲಿದೆ: ಸಚಿವೆ ಶಶಿಕಲಾ ಜೊಲ್ಲೆ 

16/08/2021, 17:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನನ್ನ ಮೇಲಿನ ಆರೋಪ ಬಗ್ಗೆ ನಾನು ಗಮನ ಕೊಟ್ಟಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡುವ ಪರಿಸ್ಥಿತಿಯೂ ನನಗಿಲ್ಲ. ದೇವರ‌ ದಯೆ ನನ್ನ ಮೇಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬುದ್ಧಿಮಾಂದ್ಯ ನನ್ನ ಮಗುವಿಗಾಗಿ ಈ ಸಮಾಜ ಸೇವೆ ಕ್ಷೇತ್ರಕ್ಕೆ ಬಂದಿದ್ದೇನೆ. ಆ ಮಗುವಿನ ನೋವನ್ನ ತಾಯಿಯಾಗಿ ಅನುಭವಿಸಿದ್ದೇನೆ. ಯಾರೋ ಏನೋ ಅಪಾದನೆ ಮಾಡಿದರೆ ಅದನ್ನ ಬೇಜಾರು ಮಾಡಿಕೊಳ್ಳದೇ ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಅವರು ನುಡಿದರು.

ಸಚಿವ ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ನನ್ನ ಮೇಲೆ ಆಪಾದನೆ ಮಾಡಿರಬಹುದು. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಕುರಿತು ಸಾಕ್ಷಾಧಾರ ಇಲ್ಲ. ಹಾಗಾಗಿ ಯಾರ ಮೇಲೂ ಆರೋಪ ಮಾಡುವುದಿಲ್ಲ. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೋ ಅವರು ಅನುಭವಿಸುತ್ತಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಏನಾದ್ರೂ ಷಡ್ಯಂತ್ರ ಮಾಡಿದ್ದರೆ ದೇವರು ನೋಡಿಕೊಳ್ಳುತ್ತಾನೆ. ಬಡವರ ಕಣ್ಣೀರು ಒರೆಸಿದ ಆಶೀರ್ವಾದ ನನ್ನ ಜತೆ ಇದೆ.

ಇದೇ ಕಾರಣಕ್ಕಾಗಿ ಎರಡನೇ ಬಾರಿ ಸಚಿವೆಯಾಗಿ ಅಧಿಕಾರವಹಿಸಿಕೊಂಡಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು