7:03 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ನಾನು ಯಾವುದೇ ತಪ್ಪು ಮಾಡಿಲ್ಲ, ದೇವರ‌ ದಯೆ ನನ್ನ ಮೇಲಿದೆ: ಸಚಿವೆ ಶಶಿಕಲಾ ಜೊಲ್ಲೆ 

16/08/2021, 17:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನನ್ನ ಮೇಲಿನ ಆರೋಪ ಬಗ್ಗೆ ನಾನು ಗಮನ ಕೊಟ್ಟಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡುವ ಪರಿಸ್ಥಿತಿಯೂ ನನಗಿಲ್ಲ. ದೇವರ‌ ದಯೆ ನನ್ನ ಮೇಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬುದ್ಧಿಮಾಂದ್ಯ ನನ್ನ ಮಗುವಿಗಾಗಿ ಈ ಸಮಾಜ ಸೇವೆ ಕ್ಷೇತ್ರಕ್ಕೆ ಬಂದಿದ್ದೇನೆ. ಆ ಮಗುವಿನ ನೋವನ್ನ ತಾಯಿಯಾಗಿ ಅನುಭವಿಸಿದ್ದೇನೆ. ಯಾರೋ ಏನೋ ಅಪಾದನೆ ಮಾಡಿದರೆ ಅದನ್ನ ಬೇಜಾರು ಮಾಡಿಕೊಳ್ಳದೇ ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಅವರು ನುಡಿದರು.

ಸಚಿವ ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ನನ್ನ ಮೇಲೆ ಆಪಾದನೆ ಮಾಡಿರಬಹುದು. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಕುರಿತು ಸಾಕ್ಷಾಧಾರ ಇಲ್ಲ. ಹಾಗಾಗಿ ಯಾರ ಮೇಲೂ ಆರೋಪ ಮಾಡುವುದಿಲ್ಲ. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೋ ಅವರು ಅನುಭವಿಸುತ್ತಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಏನಾದ್ರೂ ಷಡ್ಯಂತ್ರ ಮಾಡಿದ್ದರೆ ದೇವರು ನೋಡಿಕೊಳ್ಳುತ್ತಾನೆ. ಬಡವರ ಕಣ್ಣೀರು ಒರೆಸಿದ ಆಶೀರ್ವಾದ ನನ್ನ ಜತೆ ಇದೆ.

ಇದೇ ಕಾರಣಕ್ಕಾಗಿ ಎರಡನೇ ಬಾರಿ ಸಚಿವೆಯಾಗಿ ಅಧಿಕಾರವಹಿಸಿಕೊಂಡಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು