7:29 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ನಾಪೋಕ್ಲು: ಜನರ ಸಮಸ್ಯೆ ಪರಿಹಾರಕ್ಕೆ ಡಿ.18ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ

16/12/2021, 08:31

ಮಡಿಕೇರಿ(reporterkarnataka.com): 

ತಹಶೀಲ್ದಾರರು ಮತ್ತು ಇತರ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್ 18 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ನಡೆಸುವ ಬಗ್ಗೆ ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡಿ ರೈತರ ದಾಖಲೆಗಳು ಹಾಗೂ ಸೇವೆಯನ್ನು ಪರಿಶೀಲಿಸಿ ಪರಿಹಾರ ಕ್ರಮವಹಿಸಲು ತಹಶೀಲ್ದಾರರು ಮತ್ತು ಇತರೆ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್, 18 ರಂದು ಬೆಳಗ್ಗೆ 10 ಗಂಟೆಗೆ ನಾಪೋಕ್ಲು ಹೋಬಳಿಯ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  

ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮಗಳ ಪಹಣಿ ದಾಖಲೆಗಳ ತಿದ್ದುಪಡಿ, ಗ್ರಾಮದ ಪೌತಿ ಖಾತೆಗಳ ಕ್ರಮಗೊಳಿಸುವ ವಿಷಯಗಳು, ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ವಿಷಯಗಳು, ಆಹಾರ ಪಡಿತರ ಚೀಟಿಗೆ ಸಂಬಂಧಿಸಿದ ವಿಷಯಗಳು, ಪೋಡಿ, ಅಳತೆ ವಿಚಾರಕ್ಕೆ ಸಂಬಂಧಿಸಿದ ವಿಷಯಗಳು, ಸ್ಮಶಾನ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಜಮೀನು ಕಾಯ್ದಿರಿಸುವಿಕೆ, ಸರ್ಕಾರಿ ಜಮೀನಿನ ಒತ್ತುವರಿ ವಿಚಾರಗಳು, ಆಧಾರ್ ಕಾರ್ಡಿಗೆ ಸಂಬಂಧಿಸಿದ ವಿಷಯಗಳು, ನಾಡಕಚೇರಿ, ಎಜೆಎಸ್ಕೆಪ ಕೇಂದ್ರಗಳಲ್ಲಿ ನೀಡುವ ಸೇವೆಗಳ ಕುರಿತು, ಅತಿವೃಷ್ಟಿ ಪರಿಹಾರ ವಿಚಾರಗಳು ಮತ್ತು ಗ್ರಾಮದ ಸಮಸ್ಯೆಗಳ ಇತರೆ ವಿಷಯಗಳ ಕುರಿತು ಅರ್ಜಿ ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅಂತಿಮ ವಿಲೇವಾರಿ/ ಫಲಾನುಭವಿಗಳಿಗೆ ಸೌಲಭ್ಯ ನೀಡಲು ಕ್ರಮವಹಿಸಲಾಗುವುದು ಎಂದು ತಹಶೀಲ್ದಾರರಾದ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು