1:47 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ನಾಪೋಕ್ಲು: ಜನರ ಸಮಸ್ಯೆ ಪರಿಹಾರಕ್ಕೆ ಡಿ.18ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ

16/12/2021, 08:31

ಮಡಿಕೇರಿ(reporterkarnataka.com): 

ತಹಶೀಲ್ದಾರರು ಮತ್ತು ಇತರ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್ 18 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ನಡೆಸುವ ಬಗ್ಗೆ ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡಿ ರೈತರ ದಾಖಲೆಗಳು ಹಾಗೂ ಸೇವೆಯನ್ನು ಪರಿಶೀಲಿಸಿ ಪರಿಹಾರ ಕ್ರಮವಹಿಸಲು ತಹಶೀಲ್ದಾರರು ಮತ್ತು ಇತರೆ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್, 18 ರಂದು ಬೆಳಗ್ಗೆ 10 ಗಂಟೆಗೆ ನಾಪೋಕ್ಲು ಹೋಬಳಿಯ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  

ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮಗಳ ಪಹಣಿ ದಾಖಲೆಗಳ ತಿದ್ದುಪಡಿ, ಗ್ರಾಮದ ಪೌತಿ ಖಾತೆಗಳ ಕ್ರಮಗೊಳಿಸುವ ವಿಷಯಗಳು, ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ವಿಷಯಗಳು, ಆಹಾರ ಪಡಿತರ ಚೀಟಿಗೆ ಸಂಬಂಧಿಸಿದ ವಿಷಯಗಳು, ಪೋಡಿ, ಅಳತೆ ವಿಚಾರಕ್ಕೆ ಸಂಬಂಧಿಸಿದ ವಿಷಯಗಳು, ಸ್ಮಶಾನ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಜಮೀನು ಕಾಯ್ದಿರಿಸುವಿಕೆ, ಸರ್ಕಾರಿ ಜಮೀನಿನ ಒತ್ತುವರಿ ವಿಚಾರಗಳು, ಆಧಾರ್ ಕಾರ್ಡಿಗೆ ಸಂಬಂಧಿಸಿದ ವಿಷಯಗಳು, ನಾಡಕಚೇರಿ, ಎಜೆಎಸ್ಕೆಪ ಕೇಂದ್ರಗಳಲ್ಲಿ ನೀಡುವ ಸೇವೆಗಳ ಕುರಿತು, ಅತಿವೃಷ್ಟಿ ಪರಿಹಾರ ವಿಚಾರಗಳು ಮತ್ತು ಗ್ರಾಮದ ಸಮಸ್ಯೆಗಳ ಇತರೆ ವಿಷಯಗಳ ಕುರಿತು ಅರ್ಜಿ ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅಂತಿಮ ವಿಲೇವಾರಿ/ ಫಲಾನುಭವಿಗಳಿಗೆ ಸೌಲಭ್ಯ ನೀಡಲು ಕ್ರಮವಹಿಸಲಾಗುವುದು ಎಂದು ತಹಶೀಲ್ದಾರರಾದ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು