8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಾಪೋಕ್ಲು: ಜನರ ಸಮಸ್ಯೆ ಪರಿಹಾರಕ್ಕೆ ಡಿ.18ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ

16/12/2021, 08:31

ಮಡಿಕೇರಿ(reporterkarnataka.com): 

ತಹಶೀಲ್ದಾರರು ಮತ್ತು ಇತರ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್ 18 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ನಡೆಸುವ ಬಗ್ಗೆ ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡಿ ರೈತರ ದಾಖಲೆಗಳು ಹಾಗೂ ಸೇವೆಯನ್ನು ಪರಿಶೀಲಿಸಿ ಪರಿಹಾರ ಕ್ರಮವಹಿಸಲು ತಹಶೀಲ್ದಾರರು ಮತ್ತು ಇತರೆ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್, 18 ರಂದು ಬೆಳಗ್ಗೆ 10 ಗಂಟೆಗೆ ನಾಪೋಕ್ಲು ಹೋಬಳಿಯ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  

ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮಗಳ ಪಹಣಿ ದಾಖಲೆಗಳ ತಿದ್ದುಪಡಿ, ಗ್ರಾಮದ ಪೌತಿ ಖಾತೆಗಳ ಕ್ರಮಗೊಳಿಸುವ ವಿಷಯಗಳು, ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ವಿಷಯಗಳು, ಆಹಾರ ಪಡಿತರ ಚೀಟಿಗೆ ಸಂಬಂಧಿಸಿದ ವಿಷಯಗಳು, ಪೋಡಿ, ಅಳತೆ ವಿಚಾರಕ್ಕೆ ಸಂಬಂಧಿಸಿದ ವಿಷಯಗಳು, ಸ್ಮಶಾನ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಜಮೀನು ಕಾಯ್ದಿರಿಸುವಿಕೆ, ಸರ್ಕಾರಿ ಜಮೀನಿನ ಒತ್ತುವರಿ ವಿಚಾರಗಳು, ಆಧಾರ್ ಕಾರ್ಡಿಗೆ ಸಂಬಂಧಿಸಿದ ವಿಷಯಗಳು, ನಾಡಕಚೇರಿ, ಎಜೆಎಸ್ಕೆಪ ಕೇಂದ್ರಗಳಲ್ಲಿ ನೀಡುವ ಸೇವೆಗಳ ಕುರಿತು, ಅತಿವೃಷ್ಟಿ ಪರಿಹಾರ ವಿಚಾರಗಳು ಮತ್ತು ಗ್ರಾಮದ ಸಮಸ್ಯೆಗಳ ಇತರೆ ವಿಷಯಗಳ ಕುರಿತು ಅರ್ಜಿ ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅಂತಿಮ ವಿಲೇವಾರಿ/ ಫಲಾನುಭವಿಗಳಿಗೆ ಸೌಲಭ್ಯ ನೀಡಲು ಕ್ರಮವಹಿಸಲಾಗುವುದು ಎಂದು ತಹಶೀಲ್ದಾರರಾದ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು