12:09 PM Wednesday30 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ನಾರಾವಿ ಪ್ರದೇಶದಲ್ಲಿ ವರುಣನ ಆರ್ಭಟ: ತುಂಬಿ ಹರಿದ ಸುವರ್ಣ ನದಿ; ಜಲಸ್ಫೋಟದ ಶಂಕೆ

04/08/2022, 09:37

ಕಾರ್ಕಳ(reporterkarnataka.com): ಪಶ್ಚಿಮ ಘಟ್ಟ ತಪ್ಪಲಿಲ್ಲ ಪ್ರದೇಶದ ನಾರಾವಿ ಭಾಗದಲ್ಲಿ ಬುಧವಾರ ಸಂಜೆ 4 ಗಂಟೆ ವೇಳೆಗೆ  ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು, ಅವ್ಯಾಹತವಾಗಿ ಭಾರಿ ಮಳೆ ಸುರಿದಿದೆ. ಸುವರ್ಣ ನದಿಯಲ್ಲಿ ಭಾರಿ ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಸ್ಥಳೀಯರು ಜಲಸ್ಫೋಟದ ಶಂಕೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕುಸಿತವಾಗಿರುವ ಶಂಕೆ ವ್ಯಕ್ತವಾಗಿದೆ. ಕುದುರೆಮುಖ ಅಭಯಾರಣ್ಯ ವ್ಯಾಪ್ತಿ ಯಲ್ಲಿ ನದಿಯಲ್ಲಿ ಏಕಾಏಕಿ ಭಾರಿ ಕೆಸರು ನೀರಿನಿಂದ ನೀರಿನ ಹರಿವು ಉಂಟಾದ ಸಂದರ್ಭದಲ್ಲಿ ಭೂ ಕುಸಿತ ವಾಗಿರುವ ಸಂಶಯ ವ್ಯಕ್ತವಾಗಿದೆ .ಈ ಭಾಗದಲ್ಲಿ  ಮಳೆ ನಿರಂತರ ಸುರಿಯುತ್ತಿದೆ.


ನೂರಾಲ್ಬೆಟ್ಟು ನಾರಾವಿ ಕುತ್ಲೂರು , ಈದು  ಮೂರು ಗ್ರಾಮಗಳು 90% ಅರಣ್ಯ ಪ್ರದೇಶಗಳಿಂದ ಅವೃತವಾದ ಪ್ರದೇಶಗಳಾಗಿವೆ.

ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ  ಬಳಿ ಹರಿಯುತ್ತಿರುವ ಸುವರ್ಣ ನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು ದೇವಾಲಯ ರಸ್ತೆ ಸಂಪೂರ್ಣ ಜಲಾವೃತವಾಗಿತ್ತು 

ಮೊದಲ ಬಾರಿ ಜಲಾವೃತವಾದ ಸೇತುವೆ: ಕಾರ್ಕಳ ಬೆಳ್ತಂಗಡಿ ರಾಜ್ಯ ಹೆದ್ದಾರಿ ಯ ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಸೇತುವೆ ಮೇಲ್ಭಗದಲ್ಲಿ ನೀರು ಹರಿದಿದ್ದು  ದ್ವಿಚಕ್ರ ವಾಹನ ಸವಾರರಿಗೆ ಸಂಚರಿಸಲು ತೊಂದರೆ ಉಂಟಾಗಿತ್ತು.

ಸೇತುವೆ ಮೇಲ್ಬಾಗದಲ್ಲಿ ಎಕಾಏಕಿ ನೀರು ಹೆಚ್ಚಾಗ ತೊಡಗಿದಾಗ  ಭಾರಿ ಟ್ರಾಫಿಕ್ ಜಾಂ ಉಂಟಾಗಿತ್ತು. ಬಿರ್ಮೊಟ್ಟು , ರಾಮೆರಗುತ್ತು ಸುತ್ತಮುತ್ತ , ನಾರಾವಿ ಯ ಕೆಳಗಿನ ಪೇಟೆ  ಯ ಸುತ್ತಮುತ್ತಲಿನ ತೋಟಗಳಿಗೆ ನೀರು ನುಗ್ಗಿತ್ತು‌.


ಸ್ಥಳೀಯ ರು ಹೇಳಿರುವಂತೆ ಮೊದಲ ಬಾರಿಗೆ ಮಳೆಗೆ ಅಂಚಿಕಟ್ಟೆ ಸೇತುವೆ ಮುಳುಗಡೆಯಾಗಿದೆ . ಸೆತುವೆಯ ಮೇಲ್ಭಾಗದಲ್ಲಿ2 ಅಡಿ ನೀರು ನಿಂತಿದ್ದು ಒಂದು ಘಂಟೆ ಗಳ ಕಾಲ ಜಾಂ  ಉಂಟಾಗಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು