1:45 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ನಾರಾವಿ ಪ್ರದೇಶದಲ್ಲಿ ವರುಣನ ಆರ್ಭಟ: ತುಂಬಿ ಹರಿದ ಸುವರ್ಣ ನದಿ; ಜಲಸ್ಫೋಟದ ಶಂಕೆ

04/08/2022, 09:37

ಕಾರ್ಕಳ(reporterkarnataka.com): ಪಶ್ಚಿಮ ಘಟ್ಟ ತಪ್ಪಲಿಲ್ಲ ಪ್ರದೇಶದ ನಾರಾವಿ ಭಾಗದಲ್ಲಿ ಬುಧವಾರ ಸಂಜೆ 4 ಗಂಟೆ ವೇಳೆಗೆ  ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು, ಅವ್ಯಾಹತವಾಗಿ ಭಾರಿ ಮಳೆ ಸುರಿದಿದೆ. ಸುವರ್ಣ ನದಿಯಲ್ಲಿ ಭಾರಿ ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಸ್ಥಳೀಯರು ಜಲಸ್ಫೋಟದ ಶಂಕೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕುಸಿತವಾಗಿರುವ ಶಂಕೆ ವ್ಯಕ್ತವಾಗಿದೆ. ಕುದುರೆಮುಖ ಅಭಯಾರಣ್ಯ ವ್ಯಾಪ್ತಿ ಯಲ್ಲಿ ನದಿಯಲ್ಲಿ ಏಕಾಏಕಿ ಭಾರಿ ಕೆಸರು ನೀರಿನಿಂದ ನೀರಿನ ಹರಿವು ಉಂಟಾದ ಸಂದರ್ಭದಲ್ಲಿ ಭೂ ಕುಸಿತ ವಾಗಿರುವ ಸಂಶಯ ವ್ಯಕ್ತವಾಗಿದೆ .ಈ ಭಾಗದಲ್ಲಿ  ಮಳೆ ನಿರಂತರ ಸುರಿಯುತ್ತಿದೆ.


ನೂರಾಲ್ಬೆಟ್ಟು ನಾರಾವಿ ಕುತ್ಲೂರು , ಈದು  ಮೂರು ಗ್ರಾಮಗಳು 90% ಅರಣ್ಯ ಪ್ರದೇಶಗಳಿಂದ ಅವೃತವಾದ ಪ್ರದೇಶಗಳಾಗಿವೆ.

ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ  ಬಳಿ ಹರಿಯುತ್ತಿರುವ ಸುವರ್ಣ ನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು ದೇವಾಲಯ ರಸ್ತೆ ಸಂಪೂರ್ಣ ಜಲಾವೃತವಾಗಿತ್ತು 

ಮೊದಲ ಬಾರಿ ಜಲಾವೃತವಾದ ಸೇತುವೆ: ಕಾರ್ಕಳ ಬೆಳ್ತಂಗಡಿ ರಾಜ್ಯ ಹೆದ್ದಾರಿ ಯ ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಸೇತುವೆ ಮೇಲ್ಭಗದಲ್ಲಿ ನೀರು ಹರಿದಿದ್ದು  ದ್ವಿಚಕ್ರ ವಾಹನ ಸವಾರರಿಗೆ ಸಂಚರಿಸಲು ತೊಂದರೆ ಉಂಟಾಗಿತ್ತು.

ಸೇತುವೆ ಮೇಲ್ಬಾಗದಲ್ಲಿ ಎಕಾಏಕಿ ನೀರು ಹೆಚ್ಚಾಗ ತೊಡಗಿದಾಗ  ಭಾರಿ ಟ್ರಾಫಿಕ್ ಜಾಂ ಉಂಟಾಗಿತ್ತು. ಬಿರ್ಮೊಟ್ಟು , ರಾಮೆರಗುತ್ತು ಸುತ್ತಮುತ್ತ , ನಾರಾವಿ ಯ ಕೆಳಗಿನ ಪೇಟೆ  ಯ ಸುತ್ತಮುತ್ತಲಿನ ತೋಟಗಳಿಗೆ ನೀರು ನುಗ್ಗಿತ್ತು‌.


ಸ್ಥಳೀಯ ರು ಹೇಳಿರುವಂತೆ ಮೊದಲ ಬಾರಿಗೆ ಮಳೆಗೆ ಅಂಚಿಕಟ್ಟೆ ಸೇತುವೆ ಮುಳುಗಡೆಯಾಗಿದೆ . ಸೆತುವೆಯ ಮೇಲ್ಭಾಗದಲ್ಲಿ2 ಅಡಿ ನೀರು ನಿಂತಿದ್ದು ಒಂದು ಘಂಟೆ ಗಳ ಕಾಲ ಜಾಂ  ಉಂಟಾಗಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು