12:22 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ನಾರಾವಿ ಪ್ರದೇಶದಲ್ಲಿ ವರುಣನ ಆರ್ಭಟ: ತುಂಬಿ ಹರಿದ ಸುವರ್ಣ ನದಿ; ಜಲಸ್ಫೋಟದ ಶಂಕೆ

04/08/2022, 09:37

ಕಾರ್ಕಳ(reporterkarnataka.com): ಪಶ್ಚಿಮ ಘಟ್ಟ ತಪ್ಪಲಿಲ್ಲ ಪ್ರದೇಶದ ನಾರಾವಿ ಭಾಗದಲ್ಲಿ ಬುಧವಾರ ಸಂಜೆ 4 ಗಂಟೆ ವೇಳೆಗೆ  ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು, ಅವ್ಯಾಹತವಾಗಿ ಭಾರಿ ಮಳೆ ಸುರಿದಿದೆ. ಸುವರ್ಣ ನದಿಯಲ್ಲಿ ಭಾರಿ ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಸ್ಥಳೀಯರು ಜಲಸ್ಫೋಟದ ಶಂಕೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕುಸಿತವಾಗಿರುವ ಶಂಕೆ ವ್ಯಕ್ತವಾಗಿದೆ. ಕುದುರೆಮುಖ ಅಭಯಾರಣ್ಯ ವ್ಯಾಪ್ತಿ ಯಲ್ಲಿ ನದಿಯಲ್ಲಿ ಏಕಾಏಕಿ ಭಾರಿ ಕೆಸರು ನೀರಿನಿಂದ ನೀರಿನ ಹರಿವು ಉಂಟಾದ ಸಂದರ್ಭದಲ್ಲಿ ಭೂ ಕುಸಿತ ವಾಗಿರುವ ಸಂಶಯ ವ್ಯಕ್ತವಾಗಿದೆ .ಈ ಭಾಗದಲ್ಲಿ  ಮಳೆ ನಿರಂತರ ಸುರಿಯುತ್ತಿದೆ.


ನೂರಾಲ್ಬೆಟ್ಟು ನಾರಾವಿ ಕುತ್ಲೂರು , ಈದು  ಮೂರು ಗ್ರಾಮಗಳು 90% ಅರಣ್ಯ ಪ್ರದೇಶಗಳಿಂದ ಅವೃತವಾದ ಪ್ರದೇಶಗಳಾಗಿವೆ.

ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ  ಬಳಿ ಹರಿಯುತ್ತಿರುವ ಸುವರ್ಣ ನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು ದೇವಾಲಯ ರಸ್ತೆ ಸಂಪೂರ್ಣ ಜಲಾವೃತವಾಗಿತ್ತು 

ಮೊದಲ ಬಾರಿ ಜಲಾವೃತವಾದ ಸೇತುವೆ: ಕಾರ್ಕಳ ಬೆಳ್ತಂಗಡಿ ರಾಜ್ಯ ಹೆದ್ದಾರಿ ಯ ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಸೇತುವೆ ಮೇಲ್ಭಗದಲ್ಲಿ ನೀರು ಹರಿದಿದ್ದು  ದ್ವಿಚಕ್ರ ವಾಹನ ಸವಾರರಿಗೆ ಸಂಚರಿಸಲು ತೊಂದರೆ ಉಂಟಾಗಿತ್ತು.

ಸೇತುವೆ ಮೇಲ್ಬಾಗದಲ್ಲಿ ಎಕಾಏಕಿ ನೀರು ಹೆಚ್ಚಾಗ ತೊಡಗಿದಾಗ  ಭಾರಿ ಟ್ರಾಫಿಕ್ ಜಾಂ ಉಂಟಾಗಿತ್ತು. ಬಿರ್ಮೊಟ್ಟು , ರಾಮೆರಗುತ್ತು ಸುತ್ತಮುತ್ತ , ನಾರಾವಿ ಯ ಕೆಳಗಿನ ಪೇಟೆ  ಯ ಸುತ್ತಮುತ್ತಲಿನ ತೋಟಗಳಿಗೆ ನೀರು ನುಗ್ಗಿತ್ತು‌.


ಸ್ಥಳೀಯ ರು ಹೇಳಿರುವಂತೆ ಮೊದಲ ಬಾರಿಗೆ ಮಳೆಗೆ ಅಂಚಿಕಟ್ಟೆ ಸೇತುವೆ ಮುಳುಗಡೆಯಾಗಿದೆ . ಸೆತುವೆಯ ಮೇಲ್ಭಾಗದಲ್ಲಿ2 ಅಡಿ ನೀರು ನಿಂತಿದ್ದು ಒಂದು ಘಂಟೆ ಗಳ ಕಾಲ ಜಾಂ  ಉಂಟಾಗಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು