11:20 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ನಾರಾವಿ ಪ್ರದೇಶದಲ್ಲಿ ವರುಣನ ಆರ್ಭಟ: ತುಂಬಿ ಹರಿದ ಸುವರ್ಣ ನದಿ; ಜಲಸ್ಫೋಟದ ಶಂಕೆ

04/08/2022, 09:37

ಕಾರ್ಕಳ(reporterkarnataka.com): ಪಶ್ಚಿಮ ಘಟ್ಟ ತಪ್ಪಲಿಲ್ಲ ಪ್ರದೇಶದ ನಾರಾವಿ ಭಾಗದಲ್ಲಿ ಬುಧವಾರ ಸಂಜೆ 4 ಗಂಟೆ ವೇಳೆಗೆ  ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು, ಅವ್ಯಾಹತವಾಗಿ ಭಾರಿ ಮಳೆ ಸುರಿದಿದೆ. ಸುವರ್ಣ ನದಿಯಲ್ಲಿ ಭಾರಿ ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಸ್ಥಳೀಯರು ಜಲಸ್ಫೋಟದ ಶಂಕೆ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕುಸಿತವಾಗಿರುವ ಶಂಕೆ ವ್ಯಕ್ತವಾಗಿದೆ. ಕುದುರೆಮುಖ ಅಭಯಾರಣ್ಯ ವ್ಯಾಪ್ತಿ ಯಲ್ಲಿ ನದಿಯಲ್ಲಿ ಏಕಾಏಕಿ ಭಾರಿ ಕೆಸರು ನೀರಿನಿಂದ ನೀರಿನ ಹರಿವು ಉಂಟಾದ ಸಂದರ್ಭದಲ್ಲಿ ಭೂ ಕುಸಿತ ವಾಗಿರುವ ಸಂಶಯ ವ್ಯಕ್ತವಾಗಿದೆ .ಈ ಭಾಗದಲ್ಲಿ  ಮಳೆ ನಿರಂತರ ಸುರಿಯುತ್ತಿದೆ.


ನೂರಾಲ್ಬೆಟ್ಟು ನಾರಾವಿ ಕುತ್ಲೂರು , ಈದು  ಮೂರು ಗ್ರಾಮಗಳು 90% ಅರಣ್ಯ ಪ್ರದೇಶಗಳಿಂದ ಅವೃತವಾದ ಪ್ರದೇಶಗಳಾಗಿವೆ.

ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ  ಬಳಿ ಹರಿಯುತ್ತಿರುವ ಸುವರ್ಣ ನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು ದೇವಾಲಯ ರಸ್ತೆ ಸಂಪೂರ್ಣ ಜಲಾವೃತವಾಗಿತ್ತು 

ಮೊದಲ ಬಾರಿ ಜಲಾವೃತವಾದ ಸೇತುವೆ: ಕಾರ್ಕಳ ಬೆಳ್ತಂಗಡಿ ರಾಜ್ಯ ಹೆದ್ದಾರಿ ಯ ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಸೇತುವೆ ಮೇಲ್ಭಗದಲ್ಲಿ ನೀರು ಹರಿದಿದ್ದು  ದ್ವಿಚಕ್ರ ವಾಹನ ಸವಾರರಿಗೆ ಸಂಚರಿಸಲು ತೊಂದರೆ ಉಂಟಾಗಿತ್ತು.

ಸೇತುವೆ ಮೇಲ್ಬಾಗದಲ್ಲಿ ಎಕಾಏಕಿ ನೀರು ಹೆಚ್ಚಾಗ ತೊಡಗಿದಾಗ  ಭಾರಿ ಟ್ರಾಫಿಕ್ ಜಾಂ ಉಂಟಾಗಿತ್ತು. ಬಿರ್ಮೊಟ್ಟು , ರಾಮೆರಗುತ್ತು ಸುತ್ತಮುತ್ತ , ನಾರಾವಿ ಯ ಕೆಳಗಿನ ಪೇಟೆ  ಯ ಸುತ್ತಮುತ್ತಲಿನ ತೋಟಗಳಿಗೆ ನೀರು ನುಗ್ಗಿತ್ತು‌.


ಸ್ಥಳೀಯ ರು ಹೇಳಿರುವಂತೆ ಮೊದಲ ಬಾರಿಗೆ ಮಳೆಗೆ ಅಂಚಿಕಟ್ಟೆ ಸೇತುವೆ ಮುಳುಗಡೆಯಾಗಿದೆ . ಸೆತುವೆಯ ಮೇಲ್ಭಾಗದಲ್ಲಿ2 ಅಡಿ ನೀರು ನಿಂತಿದ್ದು ಒಂದು ಘಂಟೆ ಗಳ ಕಾಲ ಜಾಂ  ಉಂಟಾಗಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು