10:42 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ನಾಸಾ’ದ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಯುವ ಪ್ರತಿಭೆ ದಿನೇಶ್ ಹೆಗಡೆ

20/08/2021, 22:51

ಕಾರವಾರ(reporterkarnataka.com):
ಅಮೇರಿಕಾದ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆಯಾದ ‘ನಾಸಾ’ ದಿಂದ ಕೊಡಮಾಡುವ ‘ಫ಼್ಯೂಚರ್ ಇನ್ವೆಸ್ಟಿಗೇಟರ್’ ಪ್ರಶಸ್ತಿಗೆ ಜಿಲ್ಲೆಯ ಯುವ ಪ್ರತಿಭೆ ದಿನೇಶ ಹೆಗಡೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದವರಾದ ದಿನೇಶ ಹೆಗಡೆ ನಾಸಾದ ಸಂಶೋಧನಾ ಪ್ರಶಸ್ತಿ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಅವರು ಅಮೇರಿಕಾದ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ.

ಯು.ಎ.ಎಚ್.ಸೆಂಟರ್ ಫ಼ಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್’ ನ ಬಾಹ್ಯಾಕಾಶ ವಿಭಾಗದಲ್ಲಿ ಪದವಿ ಸಂಶೋಧನಾ ಸಹಾಯಕರಾಗಿಯೂ ಅವರು ಕೆಲಸ ಮಾಡುತ್ತಿದ್ದಾರೆ.

ದಿನೇಶ ಹೆಗಡೆ, ಕ್ಯಾಥರೀನ್ ಡೆವಿಡ್ಸನ್ ಎಂಬುವವರೊಂದಿಗೆ ಸಲ್ಲಿಸಿರುವ ‘ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ’ ವಿಷಯದ ಕುರಿತಾದ ಸಂಶೋಧನಾ ಪ್ರಸ್ತಾವನೆಗೆ ತಲಾ 1ಕೋಟಿ 42 ಸಾವಿರ (1,35,000 ಅಮೇರಿಕನ್ ಡಾಲರ್ ) ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಅವರು ಬಾಹ್ಯಾಕಾಶ ಹವಾಮಾನದ ಕುರಿತು ಅಧ್ಯಯನ ನಡೆಸಲು ಈ ಅನುದಾನ ನೀಡಲಾಗಿದೆ.

ಸಿದ್ದಾಪುರ ತಾಲೂಕಿನ ವಾಜಗದ್ದೆ ಸರ್ಕಾರಿ ಶಾಲೆಯಲ್ಲಿ ಹಾಗೂ ಹಾರ್ಸಿಕಟ್ಟಾದ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದಿರುವ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ಹಾಗೂ ಮೈಸೂರು ವಿವಿಯಿಂದ ಭೌತಶಾಸ್ತ್ರದಲ್ಲಿ ಎಂಎಸ್ಸಿ ಪಡೆದಿದ್ದಾರೆ.

ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಜಿಲ್ಲೆಯ ಹಾಗೂ ಕನ್ನಡನಾಡಿನ ಕೀರ್ತಿ ಪತಾಕೆ ಯನ್ನು ಉತ್ತುಂಗಕ್ಕೆರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು