2:56 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಾಸಾ’ದ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಯುವ ಪ್ರತಿಭೆ ದಿನೇಶ್ ಹೆಗಡೆ

20/08/2021, 22:51

ಕಾರವಾರ(reporterkarnataka.com):
ಅಮೇರಿಕಾದ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆಯಾದ ‘ನಾಸಾ’ ದಿಂದ ಕೊಡಮಾಡುವ ‘ಫ಼್ಯೂಚರ್ ಇನ್ವೆಸ್ಟಿಗೇಟರ್’ ಪ್ರಶಸ್ತಿಗೆ ಜಿಲ್ಲೆಯ ಯುವ ಪ್ರತಿಭೆ ದಿನೇಶ ಹೆಗಡೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದವರಾದ ದಿನೇಶ ಹೆಗಡೆ ನಾಸಾದ ಸಂಶೋಧನಾ ಪ್ರಶಸ್ತಿ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಅವರು ಅಮೇರಿಕಾದ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ.

ಯು.ಎ.ಎಚ್.ಸೆಂಟರ್ ಫ಼ಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್’ ನ ಬಾಹ್ಯಾಕಾಶ ವಿಭಾಗದಲ್ಲಿ ಪದವಿ ಸಂಶೋಧನಾ ಸಹಾಯಕರಾಗಿಯೂ ಅವರು ಕೆಲಸ ಮಾಡುತ್ತಿದ್ದಾರೆ.

ದಿನೇಶ ಹೆಗಡೆ, ಕ್ಯಾಥರೀನ್ ಡೆವಿಡ್ಸನ್ ಎಂಬುವವರೊಂದಿಗೆ ಸಲ್ಲಿಸಿರುವ ‘ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ’ ವಿಷಯದ ಕುರಿತಾದ ಸಂಶೋಧನಾ ಪ್ರಸ್ತಾವನೆಗೆ ತಲಾ 1ಕೋಟಿ 42 ಸಾವಿರ (1,35,000 ಅಮೇರಿಕನ್ ಡಾಲರ್ ) ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಅವರು ಬಾಹ್ಯಾಕಾಶ ಹವಾಮಾನದ ಕುರಿತು ಅಧ್ಯಯನ ನಡೆಸಲು ಈ ಅನುದಾನ ನೀಡಲಾಗಿದೆ.

ಸಿದ್ದಾಪುರ ತಾಲೂಕಿನ ವಾಜಗದ್ದೆ ಸರ್ಕಾರಿ ಶಾಲೆಯಲ್ಲಿ ಹಾಗೂ ಹಾರ್ಸಿಕಟ್ಟಾದ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದಿರುವ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ಹಾಗೂ ಮೈಸೂರು ವಿವಿಯಿಂದ ಭೌತಶಾಸ್ತ್ರದಲ್ಲಿ ಎಂಎಸ್ಸಿ ಪಡೆದಿದ್ದಾರೆ.

ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಜಿಲ್ಲೆಯ ಹಾಗೂ ಕನ್ನಡನಾಡಿನ ಕೀರ್ತಿ ಪತಾಕೆ ಯನ್ನು ಉತ್ತುಂಗಕ್ಕೆರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು