3:42 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ನಾಸಾ’ದ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಯುವ ಪ್ರತಿಭೆ ದಿನೇಶ್ ಹೆಗಡೆ

20/08/2021, 22:51

ಕಾರವಾರ(reporterkarnataka.com):
ಅಮೇರಿಕಾದ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆಯಾದ ‘ನಾಸಾ’ ದಿಂದ ಕೊಡಮಾಡುವ ‘ಫ಼್ಯೂಚರ್ ಇನ್ವೆಸ್ಟಿಗೇಟರ್’ ಪ್ರಶಸ್ತಿಗೆ ಜಿಲ್ಲೆಯ ಯುವ ಪ್ರತಿಭೆ ದಿನೇಶ ಹೆಗಡೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದವರಾದ ದಿನೇಶ ಹೆಗಡೆ ನಾಸಾದ ಸಂಶೋಧನಾ ಪ್ರಶಸ್ತಿ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಅವರು ಅಮೇರಿಕಾದ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ.

ಯು.ಎ.ಎಚ್.ಸೆಂಟರ್ ಫ಼ಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್’ ನ ಬಾಹ್ಯಾಕಾಶ ವಿಭಾಗದಲ್ಲಿ ಪದವಿ ಸಂಶೋಧನಾ ಸಹಾಯಕರಾಗಿಯೂ ಅವರು ಕೆಲಸ ಮಾಡುತ್ತಿದ್ದಾರೆ.

ದಿನೇಶ ಹೆಗಡೆ, ಕ್ಯಾಥರೀನ್ ಡೆವಿಡ್ಸನ್ ಎಂಬುವವರೊಂದಿಗೆ ಸಲ್ಲಿಸಿರುವ ‘ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ’ ವಿಷಯದ ಕುರಿತಾದ ಸಂಶೋಧನಾ ಪ್ರಸ್ತಾವನೆಗೆ ತಲಾ 1ಕೋಟಿ 42 ಸಾವಿರ (1,35,000 ಅಮೇರಿಕನ್ ಡಾಲರ್ ) ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಅವರು ಬಾಹ್ಯಾಕಾಶ ಹವಾಮಾನದ ಕುರಿತು ಅಧ್ಯಯನ ನಡೆಸಲು ಈ ಅನುದಾನ ನೀಡಲಾಗಿದೆ.

ಸಿದ್ದಾಪುರ ತಾಲೂಕಿನ ವಾಜಗದ್ದೆ ಸರ್ಕಾರಿ ಶಾಲೆಯಲ್ಲಿ ಹಾಗೂ ಹಾರ್ಸಿಕಟ್ಟಾದ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದಿರುವ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ಹಾಗೂ ಮೈಸೂರು ವಿವಿಯಿಂದ ಭೌತಶಾಸ್ತ್ರದಲ್ಲಿ ಎಂಎಸ್ಸಿ ಪಡೆದಿದ್ದಾರೆ.

ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಜಿಲ್ಲೆಯ ಹಾಗೂ ಕನ್ನಡನಾಡಿನ ಕೀರ್ತಿ ಪತಾಕೆ ಯನ್ನು ಉತ್ತುಂಗಕ್ಕೆರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು