8:31 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ

25/04/2024, 18:48

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಾಳೆ (ಏಪ್ರಿಲ್ 26ರಂದು) ನಡೆಯಲಿದ್ದು, ಚುನಾವಣಾ ಸಿಬ್ಬಂದಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಜತೆ ನಗರದ ಉರ್ವ ಕೆನರಾ ಹೈಸ್ಕೂಲಿನಿಂದ ಇಂದು ಸಂಜೆ ಮತಗಟ್ಟೆಗೆ ತೆರಳಿದರು.
ಜಿಲ್ಲೆಯಾದ್ಯಂತ 1876 ಮತಗಟ್ಟೆಗಳಿದ್ದು, ಒಟ್ಟು11, 255 ಮಂದಿ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇದರಲ್ಲಿ ಅಧಿಕಾರಿಗಳು ಕೂಡ ಸೇರಿದ್ದಾರೆ. 2251 ಮಂದಿ ಪ್ರಿಸೈಡಿಂಗ್ ಅಧಿಕಾರಿಗಳನ್ನು ನೇಮಿಸಲಾಗಿದೆ.


ಇಂದು ಬೆಳಗ್ಗೆಯೇ ನಗರದ ಉರ್ವ ಕೆನರಾ ಹೈಸ್ಕೂಲಿನಲ್ಲಿ ಚುನಾವಣಾ ಸಿಬ್ಬಂದಿಗಳಿಗೆ ಕೊನೆಯ ಹಂತದ ಸಿದ್ದತೆಗಳನ್ನು ನಡೆಸಲಾಯಿತು. ಜಿಲ್ಲಾದ್ಯಂತವಿರುವ 1876 ಮತಗಟ್ಟೆಗಳಿಗೆ ಇವಿಎಂ ಮೆಷಿನೊಂದಿಗೆ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾದ ವಾಹನದಲ್ಲಿ ಭದ್ರತೆಯೊಂದಿಗೆ ಕಳುಹಿಸಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು