7:26 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ನಾಡಹಬ್ಬ ಮೈಸೂರು ದಸರಾ: ಚಿನ್ನದ ಅಂಬಾರಿಯಲ್ಲಿ ಚಾಮುಂಡಿ ತಾಯಿ ಜಂಬೂ ಸವಾರಿಗೆ ಕ್ಷಣಗಣನೆ

02/10/2025, 09:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಚಿನ್ನದ ಅಂಬಾರಿಯಲ್ಲಿ ನಾಡಿನ ಆದಿ ದೇವತೆ ಚಾಮುಂಡೇಶ್ವರಿ ದೇವಿ ಯನ್ನು ಹೊತ್ತು ಸಾಗುವ ಜಂಬೂ ಸವಾರಿಗೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ.
ಈ ಬಾರಿಯ ವಿಜಯದಶಮಿ ಜಂಬೂಸವಾರಿ ಅಭಿಮನ್ಯು ನೇತೃತ್ವದ ದಸರಾ ಗಜಪಡೆ, ಅಶ್ವಾರೋಹಿದಳ ಭಾಗಿಯಾಗಲಿವೆ.ಅಂಬಾರಿ ಆನೆ ಅಭಿಮನ್ಯುವಿಗೆ ಎಡಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ, ರೂಪ ಸಾಥ್ ನೀಡಲಿದೆ.ನಿಶಾನೆ ಆನೆಯಾಗಿ ಧನಂಜಯ, ನೌಫತ್ ಆನೆಯಾಗಿ ಗೋಪಿ ಭಾಗಿಯಾಗಲಿದೆ. ಸಾಲಾನೆಗಳಾಗಿ ಮಹೇಂದ್ರ, ಶ್ರೀಕಂಠ, ಲಕ್ಷ್ಮಿ, ಕಂಜನ್, ಭೀಮ, ಏಕಲವ್ಯ, ಪ್ರಶಾಂತ, ಸುಗ್ರಿವ, ಹೇಮಾವತಿ ಆನೆಗಳು ಜಂಬೂಸವಾರಿ ಮೆರವಣಿಗೆಯ ಭಾಗಿಯಾಗಲಿದೆ, ಅಂಬಾರಿ ಹೊತ್ತು ಸಾಗಲಿರುವ ಪೊಲೀಸ್ ವಾದ್ಯವೃಂದ, ಪೊಲೀಸ್ ಇಲಾಖೆಯ ತುಕಡಿ, ಅರಣ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಪಂಚಾಯಿತಿಗಳಿಂದ ಸ್ತಬ್ದ ಚಿತ್ರಗಳು, ಕಲಾ ತಂಡಗಳು ಅರಮನೆ ಅವರದಿಂದ ಹೊರಟು, ಬನ್ನಿಮಂಟಪ ದವರೆಗೆ ಮೆರವಣಿಗೆ ಸಾಗಲಿದೆ.
ಬನ್ನಿಮಂಟಪ ಕಾವಾಯತ್ತು ಮೈದಾನದಲ್ಲಿ ಡ್ರೋನ್ ಪ್ರದರ್ಶನ, ಪಂಜಿನ ಪೆರೇಡ್ ನಡೆಯಲಿದ್ದು, ಈಗಾಗಲೇ ಸಾರ್ವಜನಿಕರ ಮನಗೆದ್ದಿರುವ ಡ್ರೋನ್ ಹಾರಾಟ ಗಿನ್ನಿಸ್ ರೆಕಾರ್ಡ್ ಗೆ ಪಾತ್ರವಾಗಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯುವ ಈ ಪ್ರದರ್ಶನ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.
ಸಾವಿರಾರು ಮೈದಾನದಲ್ಲಿ ‌3000 ಡ್ರೋನ್ ಗಳು ಆಗಸದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸುವ ಮೂಲಕ ಎಲ್ಲರನ್ನು ರೋಮಾಂಚನಗೊಳಿಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು