10:17 PM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ನಾಡಹಬ್ಬ ಮೈಸೂರು ದಸರಾ: ಚಿನ್ನದ ಅಂಬಾರಿಯಲ್ಲಿ ಚಾಮುಂಡಿ ತಾಯಿ ಜಂಬೂ ಸವಾರಿಗೆ ಕ್ಷಣಗಣನೆ

02/10/2025, 09:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಚಿನ್ನದ ಅಂಬಾರಿಯಲ್ಲಿ ನಾಡಿನ ಆದಿ ದೇವತೆ ಚಾಮುಂಡೇಶ್ವರಿ ದೇವಿ ಯನ್ನು ಹೊತ್ತು ಸಾಗುವ ಜಂಬೂ ಸವಾರಿಗೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ.
ಈ ಬಾರಿಯ ವಿಜಯದಶಮಿ ಜಂಬೂಸವಾರಿ ಅಭಿಮನ್ಯು ನೇತೃತ್ವದ ದಸರಾ ಗಜಪಡೆ, ಅಶ್ವಾರೋಹಿದಳ ಭಾಗಿಯಾಗಲಿವೆ.ಅಂಬಾರಿ ಆನೆ ಅಭಿಮನ್ಯುವಿಗೆ ಎಡಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ, ರೂಪ ಸಾಥ್ ನೀಡಲಿದೆ.ನಿಶಾನೆ ಆನೆಯಾಗಿ ಧನಂಜಯ, ನೌಫತ್ ಆನೆಯಾಗಿ ಗೋಪಿ ಭಾಗಿಯಾಗಲಿದೆ. ಸಾಲಾನೆಗಳಾಗಿ ಮಹೇಂದ್ರ, ಶ್ರೀಕಂಠ, ಲಕ್ಷ್ಮಿ, ಕಂಜನ್, ಭೀಮ, ಏಕಲವ್ಯ, ಪ್ರಶಾಂತ, ಸುಗ್ರಿವ, ಹೇಮಾವತಿ ಆನೆಗಳು ಜಂಬೂಸವಾರಿ ಮೆರವಣಿಗೆಯ ಭಾಗಿಯಾಗಲಿದೆ, ಅಂಬಾರಿ ಹೊತ್ತು ಸಾಗಲಿರುವ ಪೊಲೀಸ್ ವಾದ್ಯವೃಂದ, ಪೊಲೀಸ್ ಇಲಾಖೆಯ ತುಕಡಿ, ಅರಣ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಪಂಚಾಯಿತಿಗಳಿಂದ ಸ್ತಬ್ದ ಚಿತ್ರಗಳು, ಕಲಾ ತಂಡಗಳು ಅರಮನೆ ಅವರದಿಂದ ಹೊರಟು, ಬನ್ನಿಮಂಟಪ ದವರೆಗೆ ಮೆರವಣಿಗೆ ಸಾಗಲಿದೆ.
ಬನ್ನಿಮಂಟಪ ಕಾವಾಯತ್ತು ಮೈದಾನದಲ್ಲಿ ಡ್ರೋನ್ ಪ್ರದರ್ಶನ, ಪಂಜಿನ ಪೆರೇಡ್ ನಡೆಯಲಿದ್ದು, ಈಗಾಗಲೇ ಸಾರ್ವಜನಿಕರ ಮನಗೆದ್ದಿರುವ ಡ್ರೋನ್ ಹಾರಾಟ ಗಿನ್ನಿಸ್ ರೆಕಾರ್ಡ್ ಗೆ ಪಾತ್ರವಾಗಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯುವ ಈ ಪ್ರದರ್ಶನ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.
ಸಾವಿರಾರು ಮೈದಾನದಲ್ಲಿ ‌3000 ಡ್ರೋನ್ ಗಳು ಆಗಸದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸುವ ಮೂಲಕ ಎಲ್ಲರನ್ನು ರೋಮಾಂಚನಗೊಳಿಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು