8:14 PM Tuesday21 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

08/11/2024, 11:27

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಸಮಾಜದಲ್ಲಿ ವಿದ್ಯಾವಂತರಿಂದಲೇ ಹೆಚ್ಚು ಅಪರಾಧಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಾಲೂಕಿನ ಬೊಬ್ಬಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಅವರು ಅಂಕ ಗಳಿಸುವುದು ಪದವಿ
ಪಡೆಯುವುದು ಮಾತ್ರ ಶಿಕ್ಷಣವಲ್ಲ.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಆಗಬೇಕು. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅರಿವು ಮೂಡಬೇಕು. ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ ಎಂದರು.
ಹೆಚ್ಚು ಓದಿದ ಮಾತ್ರಕ್ಕೆ ಬಲಾಡ್ಯ ದೇಹದಾಡ್ಯತೆ ಹೊಂದಿದ ಮಾತ್ರಕ್ಕೆ ವ್ಯಕ್ತಿತ್ವದಲ್ಲಿ ಪರಿಪೂರ್ಣತೆ ಬರಲು ಸಾಧ್ಯವಿಲ್ಲ. ಒಳ್ಳೆಯ ಸಂಸ್ಕಾರ ಸಣ್ಣ ವಯಸ್ಸಿನಲ್ಲೇ ಮಕ್ಕಳಿಗೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಗಳು ಹೆಚ್ಚು ಉಪಯುಕ್ತವಾಗಿವೆ. ಮಕ್ಕಳು, ಪೋಷಕರು, ಅಧ್ಯಾಪಕರು ಪ್ರತಿಭಾ ಕಾರಂಜಿಗಳಲ್ಲಿ ಹೆಚ್ಚು ತೊಗಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಎಸ್‌.ಡಿ.ಎಂ.ಸಿ. ಅಧ್ಯಕ್ಷರಾದ ಗಣೇಶ್‌ ವಹಿಸಿದ್ದರು. ಸಭೆಯಲ್ಲಿ
ಪಂಚಾಯ್ತಿ ಅಧ್ಯಕ್ಷರಾದ ಕವಿತಾ ಭಾಸ್ಕರ್, ಸದಸ್ಯರಾದ ಸುಂದರೇಶ್, ನಾಗರಾಜ, ಶ್ರೀನಿವಾಸ ಗೌಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು