5:28 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

08/11/2024, 11:27

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಸಮಾಜದಲ್ಲಿ ವಿದ್ಯಾವಂತರಿಂದಲೇ ಹೆಚ್ಚು ಅಪರಾಧಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಾಲೂಕಿನ ಬೊಬ್ಬಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಅವರು ಅಂಕ ಗಳಿಸುವುದು ಪದವಿ
ಪಡೆಯುವುದು ಮಾತ್ರ ಶಿಕ್ಷಣವಲ್ಲ.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಆಗಬೇಕು. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅರಿವು ಮೂಡಬೇಕು. ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ ಎಂದರು.
ಹೆಚ್ಚು ಓದಿದ ಮಾತ್ರಕ್ಕೆ ಬಲಾಡ್ಯ ದೇಹದಾಡ್ಯತೆ ಹೊಂದಿದ ಮಾತ್ರಕ್ಕೆ ವ್ಯಕ್ತಿತ್ವದಲ್ಲಿ ಪರಿಪೂರ್ಣತೆ ಬರಲು ಸಾಧ್ಯವಿಲ್ಲ. ಒಳ್ಳೆಯ ಸಂಸ್ಕಾರ ಸಣ್ಣ ವಯಸ್ಸಿನಲ್ಲೇ ಮಕ್ಕಳಿಗೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಗಳು ಹೆಚ್ಚು ಉಪಯುಕ್ತವಾಗಿವೆ. ಮಕ್ಕಳು, ಪೋಷಕರು, ಅಧ್ಯಾಪಕರು ಪ್ರತಿಭಾ ಕಾರಂಜಿಗಳಲ್ಲಿ ಹೆಚ್ಚು ತೊಗಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಎಸ್‌.ಡಿ.ಎಂ.ಸಿ. ಅಧ್ಯಕ್ಷರಾದ ಗಣೇಶ್‌ ವಹಿಸಿದ್ದರು. ಸಭೆಯಲ್ಲಿ
ಪಂಚಾಯ್ತಿ ಅಧ್ಯಕ್ಷರಾದ ಕವಿತಾ ಭಾಸ್ಕರ್, ಸದಸ್ಯರಾದ ಸುಂದರೇಶ್, ನಾಗರಾಜ, ಶ್ರೀನಿವಾಸ ಗೌಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು