7:33 AM Thursday7 - August 2025
ಬ್ರೇಕಿಂಗ್ ನ್ಯೂಸ್
ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ…

ಇತ್ತೀಚಿನ ಸುದ್ದಿ

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆರೋಪ ಸತ್ಯಕ್ಕೆ ದೂರವಾದ ಮಾತು

09/07/2021, 07:57

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸಂಘದ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಘದ ಅಧ್ಯಕ್ಷ ತಿಮ್ಮಪ್ಪ ಹೇಳಿದರು.

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಸಂಘದ ವಿರುದ್ಧ ಕೆಲವರು ನ್ಯಾಯಬೆಲೆ ಅಂಗಡಿ ಗಳಿಗೆ ತೂಕದಲ್ಲಿ ವಂಚನೆ ಮಾಡುತ್ತಿದ್ದಾರೆ ಹಾಗೂ ಆಹಾರ ಪಡಿತರ ಆಹಾರ ಪಡಿತರ ವಿತರಣೆಯಲ್ಲಿ ಅನ್ಯಾಯವಾಗಿದೆ ಎಂದು ಹೇಳಿದ್ದು ಸರಿಯಲ್ಲ. ಸಂಘವು ಉನ್ನತ ಮಟ್ಟದಲ್ಲಿ ಪ್ರಗತಿಯ ದಾಪುಗಾಲು ಹಾಕುತ್ತಿದೆ ಎಂದವರು ತಿಳಿಸಿದರು.

ಸಂಘವು 1949 ರಲ್ಲಿ ಆರಂಭಗೊಂಡು ಅಂದಿನಿಂದ ಇಂದಿನವರೆಗೂ ಯಾವುದೇ ಲೋಪವಿಲ್ಲದೆ ಆಹಾರದ ವ್ಯವಸ್ಥೆಯನ್ನು ಮಾಡುತ್ತಿದೆ. ಕೆಲವರು ಸಂಘದ ಬಗ್ಗೆ ವಿತರಣೆಯನ್ನು ಬೇರೊಂದು ಸಂಸ್ಥೆಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲು ಒತ್ತಾಯಿಸಿರುವುದು  ಅವರ ಅನುಕೂಲಕ್ಕಾಗಿ ಹೊರತು ಬೇರೆ ಯಾವುದೇ ದೃಷ್ಟಿಯಿಂದ ಅಲ್ಲ . ಇದುವರೆಗೂ ನ್ಯಾಯಬೆಲೆ ಅಂಗಡಿಗಳಿಂದ ಯಾವುದೇ ದೂರು ಬಂದಿಲ್ಲ ಹಾಗೂ ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿಗಳು ಅಮಾನತುಗೊಂಡ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲು ಆಹಾರ ಇಲಾಖೆಯಿಂದ ವಿತರಣೆ ಮಾಡಲು ಅವಕಾಶ ಕೊಟ್ಟಿರುತ್ತಾರೆ.  ಈ ರೀತಿ ಸಂಘವು ಮುನ್ನಡೆಯುತ್ತಿದ್ದು ಇದರ ಬಗ್ಗೆ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದೆಂದು ಸಹಕಾರಿ ಮಹಾಮಂಡಳದ ನಿರ್ದೇಶಕರಾದ ರಾಜೇ ಗೌಡ ಹೇಳಿದರು.

ಸಂಘದ ನಿರ್ದೇಶಕರುಗಳಾದ ದಿನೇಶ್,  ಕೃಷ್ಣೇಗೌಡ ಹಾಲತಿಗಿರೀಶ್, ಗೋವಿಂದ , ರಾಚಯ್ಯ, ಚೇತನ್ ಚಿಕ್ಕಣ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು