11:30 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆರೋಪ ಸತ್ಯಕ್ಕೆ ದೂರವಾದ ಮಾತು

09/07/2021, 07:57

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸಂಘದ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಘದ ಅಧ್ಯಕ್ಷ ತಿಮ್ಮಪ್ಪ ಹೇಳಿದರು.

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಸಂಘದ ವಿರುದ್ಧ ಕೆಲವರು ನ್ಯಾಯಬೆಲೆ ಅಂಗಡಿ ಗಳಿಗೆ ತೂಕದಲ್ಲಿ ವಂಚನೆ ಮಾಡುತ್ತಿದ್ದಾರೆ ಹಾಗೂ ಆಹಾರ ಪಡಿತರ ಆಹಾರ ಪಡಿತರ ವಿತರಣೆಯಲ್ಲಿ ಅನ್ಯಾಯವಾಗಿದೆ ಎಂದು ಹೇಳಿದ್ದು ಸರಿಯಲ್ಲ. ಸಂಘವು ಉನ್ನತ ಮಟ್ಟದಲ್ಲಿ ಪ್ರಗತಿಯ ದಾಪುಗಾಲು ಹಾಕುತ್ತಿದೆ ಎಂದವರು ತಿಳಿಸಿದರು.

ಸಂಘವು 1949 ರಲ್ಲಿ ಆರಂಭಗೊಂಡು ಅಂದಿನಿಂದ ಇಂದಿನವರೆಗೂ ಯಾವುದೇ ಲೋಪವಿಲ್ಲದೆ ಆಹಾರದ ವ್ಯವಸ್ಥೆಯನ್ನು ಮಾಡುತ್ತಿದೆ. ಕೆಲವರು ಸಂಘದ ಬಗ್ಗೆ ವಿತರಣೆಯನ್ನು ಬೇರೊಂದು ಸಂಸ್ಥೆಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲು ಒತ್ತಾಯಿಸಿರುವುದು  ಅವರ ಅನುಕೂಲಕ್ಕಾಗಿ ಹೊರತು ಬೇರೆ ಯಾವುದೇ ದೃಷ್ಟಿಯಿಂದ ಅಲ್ಲ . ಇದುವರೆಗೂ ನ್ಯಾಯಬೆಲೆ ಅಂಗಡಿಗಳಿಂದ ಯಾವುದೇ ದೂರು ಬಂದಿಲ್ಲ ಹಾಗೂ ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿಗಳು ಅಮಾನತುಗೊಂಡ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲು ಆಹಾರ ಇಲಾಖೆಯಿಂದ ವಿತರಣೆ ಮಾಡಲು ಅವಕಾಶ ಕೊಟ್ಟಿರುತ್ತಾರೆ.  ಈ ರೀತಿ ಸಂಘವು ಮುನ್ನಡೆಯುತ್ತಿದ್ದು ಇದರ ಬಗ್ಗೆ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದೆಂದು ಸಹಕಾರಿ ಮಹಾಮಂಡಳದ ನಿರ್ದೇಶಕರಾದ ರಾಜೇ ಗೌಡ ಹೇಳಿದರು.

ಸಂಘದ ನಿರ್ದೇಶಕರುಗಳಾದ ದಿನೇಶ್,  ಕೃಷ್ಣೇಗೌಡ ಹಾಲತಿಗಿರೀಶ್, ಗೋವಿಂದ , ರಾಚಯ್ಯ, ಚೇತನ್ ಚಿಕ್ಕಣ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು