12:16 PM Sunday3 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಶಾಸಕ ಸುರೇಶ್ ಗೌಡ ಚಾಲನೆ 

27/05/2021, 07:28

ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ

info.reporterkarnataka@gmail.com

ನಾಗಮಂಗಲ ತಾಲ್ಲೂಕು ಕೇಂದ್ರದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಸರ್ಕಾರದ ಯೋಜನೆಗೆ ಶಾಸಕ ಸುರೇಶಗೌಡ ಶುಭ ಹಾರೈಸಿ ಚಾಲನೆ ನೀಡಿದರು.

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಆವರಣದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಯೋಜನೆಗೆ ವಾಹನವನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡುವ ಮುಖಾಂತರ ಚಾಲನೆ ನೀಡಿದರು.

ತಾಲ್ಲೂಕಿನಲ್ಲಿ ಇರುವ ಹಳ್ಳಿಗಳ ಕಡೆ ಆರೋಗ್ಯ ಅಧಿಕಾರಿಗಳನ್ನು ಬಳಸಿಕೊಂಡು ಯೋಜನೆಗೆ ಕಾರ್ಯ ರೂಪಿಸುವುದಾಗಿ ಅವರು ತಿಳಿಸಿದರು.

ಸರ್ಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಹಳ್ಳಿಗರು ಈಗಾಗಲೇ ಸ್ವಯಂಕೃತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇರುವ ಸಿಬ್ಬಂದಿಗಳನ್ನು ಬಳಸಿಕೊಂಡು ಸೋಂಕಿತರನ್ನು ಗುರುತಿಸಿ ಕರೋನಾ ಸೆಂಟರಿಗೆ ಕಳಿಸುವ ಮುಖಾಂತರ ಸೋಂಕಿತರ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿದ್ದು ತಾಲ್ಲೂಕಿನಲ್ಲಿ ಕಾರ್ಯರೂಪಕ್ಕೆ ತರಲಾಗಿದೆ ಎಂದು ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ ಪ್ರಸನ್ನ ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಕುಂಞಿ ಅಹಮದ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತೀಶ್, ಪ್ರಭಾರ 

ಆರೋಗ್ಯಾಧಿಕಾರಿ ಪ್ರಸನ್ನ, ವೈದ್ಯಾಧಿಕಾರಿಯಾಗಿ ಚೇತನ್ ಹಾಗೂ ತಾಲ್ಲೂಕು ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು