2:04 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ನಾಗಾ ಸಾನಿಧ್ಯದ ಸ್ವಂತ ಜಮೀನನ್ನು ದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್: ದಳವಾಯಿ ಕುಟುಂಬ ಫುಲ್ ಖುಷ್

22/08/2023, 16:26

ಮಂಗಳೂರು(reporterkarnataka.com): ಅಲ್ಲಿ ಇಲ್ಲಿ ನಾವು ಭೂದಾನ ಮಾಡಿದ ವಿಷಯ ಆಗಾಗ ಕೇಳುತ್ತಲೇ ಇರುತ್ತೇವೆ. ಈಗ ವಿಧಾನಸಭೆ ಸ್ಪೀಕರ್ ಅವರೇ ತನ್ನ ಜಮೀನಲ್ಲಿರುವ ನಾಗ ಸಾನಿಧ್ಯವನ್ನು ಉಚಿತವಾಗಿ ಅದರ ವಾರೀಸುದಾರರಿಗೆ ಬಿಟ್ಟು ಕೊಟ್ಟು ಸೌಹಾರ್ದತೆಯನ್ನು ಮತ್ತೊಮ್ಮೆ ಮೆರೆದಿದ್ದಾರೆ.
ಸ್ಪೀಕರ್ ಖಾದರ್ ಅವರ ಉದಾರ ಮನೋಭಾವದಿಂದ ದಳವಾಯಿ ಕುಟುಂಬ ಫುಲ್ ಖುಷಿಯಾಗಿದೆ. ಜತೆಗೆ ಖಾದರ್ ಅವರಿಗೂ ದೈವ ಕಾರ್ಯಕ್ಕೆ ಭೂದಾನ ಮಾಡಿದ ಸಂತೃಪ್ತಿ ತುಂಬಿದೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿರುವ ತಮ್ಮ ಜಮೀನಿನಲ್ಲಿರುವ ನಾಗನ ಸಾನಿಧ್ಯದ ಜಾಗವನ್ನು ಅದರ ವಾರಸುದಾರರಿಗೆ ನೀಡಿದ್ದಾರೆ.
ಹಿರಿಯರ ಕಾಲದಲ್ಲಿ ಖಾದರ್ ಅವರ ಜಮೀನು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು. ದಳವಾಯಿ ಕುಟುಂಬದ ನಾಗಸಾನಿಧ್ಯ ಮುಸ್ಲಿಂ ಧರ್ಮದವರ ಸ್ಥಳದಲ್ಲಿರುವುದರಿಂದ ಅವರು ಬೇರೆ ಕಡೆ ಆರಾಧನೆ ಮಾಡುತ್ತಿದ್ದರು. ಮೂಲಸ್ಥಾನದ ನಾಗಕಟ್ಟೆಯಲ್ಲಿ ಪೂಜೆಯಾಗದೇ ಇರುವುದರಿಂದ ದಳವಾಯಿ ಕುಟುಂಬಕ್ಕೆ ಸಮಸ್ಯೆ ತಲೆದೋರಿತ್ತು. ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದಿದ್ದಾರೆ. ಇದೀಗ ಹಲವು ವರ್ಷಗಳಿಂದ ಅಲ್ಲಿ ವಿಜ್ರಂಬಣೆಯ ನಾಗಾರಾಧನೆ ನಡೆಯುತ್ತಿದೆ. ನಾಗರ ಪಂಚಮಿಯ ಈ ದಿನ ದಳವಾಯಿ ಕುಟುಂಬಿಕರೆಲ್ಲಾ ಅಲ್ಲಿ ಬಂದು ಸೇರುತ್ತಾರೆ. ಪೂಜೆ ಪುನಸ್ಕಾರಗಳು ಸಾಂಗವಾಗಿ ನಡೆಯುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು