5:14 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಾಗಾ ಸಾನಿಧ್ಯದ ಸ್ವಂತ ಜಮೀನನ್ನು ದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್: ದಳವಾಯಿ ಕುಟುಂಬ ಫುಲ್ ಖುಷ್

22/08/2023, 16:26

ಮಂಗಳೂರು(reporterkarnataka.com): ಅಲ್ಲಿ ಇಲ್ಲಿ ನಾವು ಭೂದಾನ ಮಾಡಿದ ವಿಷಯ ಆಗಾಗ ಕೇಳುತ್ತಲೇ ಇರುತ್ತೇವೆ. ಈಗ ವಿಧಾನಸಭೆ ಸ್ಪೀಕರ್ ಅವರೇ ತನ್ನ ಜಮೀನಲ್ಲಿರುವ ನಾಗ ಸಾನಿಧ್ಯವನ್ನು ಉಚಿತವಾಗಿ ಅದರ ವಾರೀಸುದಾರರಿಗೆ ಬಿಟ್ಟು ಕೊಟ್ಟು ಸೌಹಾರ್ದತೆಯನ್ನು ಮತ್ತೊಮ್ಮೆ ಮೆರೆದಿದ್ದಾರೆ.
ಸ್ಪೀಕರ್ ಖಾದರ್ ಅವರ ಉದಾರ ಮನೋಭಾವದಿಂದ ದಳವಾಯಿ ಕುಟುಂಬ ಫುಲ್ ಖುಷಿಯಾಗಿದೆ. ಜತೆಗೆ ಖಾದರ್ ಅವರಿಗೂ ದೈವ ಕಾರ್ಯಕ್ಕೆ ಭೂದಾನ ಮಾಡಿದ ಸಂತೃಪ್ತಿ ತುಂಬಿದೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿರುವ ತಮ್ಮ ಜಮೀನಿನಲ್ಲಿರುವ ನಾಗನ ಸಾನಿಧ್ಯದ ಜಾಗವನ್ನು ಅದರ ವಾರಸುದಾರರಿಗೆ ನೀಡಿದ್ದಾರೆ.
ಹಿರಿಯರ ಕಾಲದಲ್ಲಿ ಖಾದರ್ ಅವರ ಜಮೀನು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು. ದಳವಾಯಿ ಕುಟುಂಬದ ನಾಗಸಾನಿಧ್ಯ ಮುಸ್ಲಿಂ ಧರ್ಮದವರ ಸ್ಥಳದಲ್ಲಿರುವುದರಿಂದ ಅವರು ಬೇರೆ ಕಡೆ ಆರಾಧನೆ ಮಾಡುತ್ತಿದ್ದರು. ಮೂಲಸ್ಥಾನದ ನಾಗಕಟ್ಟೆಯಲ್ಲಿ ಪೂಜೆಯಾಗದೇ ಇರುವುದರಿಂದ ದಳವಾಯಿ ಕುಟುಂಬಕ್ಕೆ ಸಮಸ್ಯೆ ತಲೆದೋರಿತ್ತು. ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದಿದ್ದಾರೆ. ಇದೀಗ ಹಲವು ವರ್ಷಗಳಿಂದ ಅಲ್ಲಿ ವಿಜ್ರಂಬಣೆಯ ನಾಗಾರಾಧನೆ ನಡೆಯುತ್ತಿದೆ. ನಾಗರ ಪಂಚಮಿಯ ಈ ದಿನ ದಳವಾಯಿ ಕುಟುಂಬಿಕರೆಲ್ಲಾ ಅಲ್ಲಿ ಬಂದು ಸೇರುತ್ತಾರೆ. ಪೂಜೆ ಪುನಸ್ಕಾರಗಳು ಸಾಂಗವಾಗಿ ನಡೆಯುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು