2:02 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ

25/07/2024, 15:01

ಶಿವು ರಾಠೋಡ ನಾಗಬೇನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ತಾಂಡಾದಲ್ಲಿ ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಿತು.


ವೀರೇಶ್ ನಗರದಿಂದ ನಾಗಬೇನಾಳ ತಾಂಡಾದವರೆಗೂ ಬಂಜಾರ ಸಮುದಾಯದ ಉಡುಪು ತೊಡಗಿ ಧರಿಸಿಕೊಂಡು ಚಿಕ್ಕ ಮಕ್ಕಳು ಹಾಗೂ ಹಿರಿಯರು ಕಳಸ ಹಾಗೂ ನೃತ್ಯ ಮೂಲಕ ಶ್ರೀ ಸಂತ ಸೇವಾಲಾಲ್ ದೇವಸ್ಥಾನವರೆಗೆ ಮೆರವಣಿಗೆ ನಡೆಸಿದರು.
ಮರುದಿನ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಐತಿಹಾಸಿಕ ಸ್ಥಳವಾದ ಜಲದುರ್ಗಕ್ಕೆ ಹೋಗಿ ಎಲ್ಲಮ್ಮ ದೇವಿ ದರ್ಶನ ಪಡೆದು ಪಾವನಾರಾದರು.
ಅದರ ಜೊತೆಗೆ ಸಾಯಂಕಾಲ ನಾಗಬೇನಾಳ ತಾಂಡದಲ್ಲಿ ಬಂದು ಬಂಜಾರ ಸಮುದಾಯ ಯಾವ ರೀತಿ ಪ್ರಾರಂಭವಾಯಿತು, ಆ ಸಮಾಜ ಉದಯ ಮತ್ತು ಅದರ ನೋವು- ನಲಿವಿನ ಬಗ್ಗೆ ಒಂದು ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಜನಾ ಕಾರ್ಯಕ್ರಮವನ್ನು ಶಹಪುರ್ ಶರಣು ಹಾಗೂ ಚಿಂಚೋಳಿ ಸಾವಿತ್ರಿಬಾಯಿ ತಂಡವು ಮನರಂಜನೆ ಜೊತೆಗೆ ಸಮಾಜದ ಅರಿವು ಸಮಾಜದ ಬೆಳವಣಿಗೆ ಮತ್ತು ಸಮಾಜದ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದರು. ಕಾರ್ಯಕ್ರಮವು ರಾತ್ರಿ 10 ಬೆಳಗಿನ ಜಾವ 7 ವರೆಗೂ ನೆರವೇರಿತು. ಊರಿನ ಗುರು ಹಿರಿಯರು, ಮಹಿಳೆಯರು ಇಡೀ ರಾತ್ರಿ ಭಜನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೃಷ್ಣಪ್ಪ ನಾಯಕ, ಆನಂದ ನಾಯಕ್, ಮಂಜುನಾಥ ನಾಯಕ್, ರಘು ಪವಾರ್, ನಾಗಬೇನಾಳ ಯುವಕರ ತಂಡ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು