10:59 AM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ

25/07/2024, 15:01

ಶಿವು ರಾಠೋಡ ನಾಗಬೇನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ತಾಂಡಾದಲ್ಲಿ ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಿತು.


ವೀರೇಶ್ ನಗರದಿಂದ ನಾಗಬೇನಾಳ ತಾಂಡಾದವರೆಗೂ ಬಂಜಾರ ಸಮುದಾಯದ ಉಡುಪು ತೊಡಗಿ ಧರಿಸಿಕೊಂಡು ಚಿಕ್ಕ ಮಕ್ಕಳು ಹಾಗೂ ಹಿರಿಯರು ಕಳಸ ಹಾಗೂ ನೃತ್ಯ ಮೂಲಕ ಶ್ರೀ ಸಂತ ಸೇವಾಲಾಲ್ ದೇವಸ್ಥಾನವರೆಗೆ ಮೆರವಣಿಗೆ ನಡೆಸಿದರು.
ಮರುದಿನ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಐತಿಹಾಸಿಕ ಸ್ಥಳವಾದ ಜಲದುರ್ಗಕ್ಕೆ ಹೋಗಿ ಎಲ್ಲಮ್ಮ ದೇವಿ ದರ್ಶನ ಪಡೆದು ಪಾವನಾರಾದರು.
ಅದರ ಜೊತೆಗೆ ಸಾಯಂಕಾಲ ನಾಗಬೇನಾಳ ತಾಂಡದಲ್ಲಿ ಬಂದು ಬಂಜಾರ ಸಮುದಾಯ ಯಾವ ರೀತಿ ಪ್ರಾರಂಭವಾಯಿತು, ಆ ಸಮಾಜ ಉದಯ ಮತ್ತು ಅದರ ನೋವು- ನಲಿವಿನ ಬಗ್ಗೆ ಒಂದು ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಜನಾ ಕಾರ್ಯಕ್ರಮವನ್ನು ಶಹಪುರ್ ಶರಣು ಹಾಗೂ ಚಿಂಚೋಳಿ ಸಾವಿತ್ರಿಬಾಯಿ ತಂಡವು ಮನರಂಜನೆ ಜೊತೆಗೆ ಸಮಾಜದ ಅರಿವು ಸಮಾಜದ ಬೆಳವಣಿಗೆ ಮತ್ತು ಸಮಾಜದ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದರು. ಕಾರ್ಯಕ್ರಮವು ರಾತ್ರಿ 10 ಬೆಳಗಿನ ಜಾವ 7 ವರೆಗೂ ನೆರವೇರಿತು. ಊರಿನ ಗುರು ಹಿರಿಯರು, ಮಹಿಳೆಯರು ಇಡೀ ರಾತ್ರಿ ಭಜನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೃಷ್ಣಪ್ಪ ನಾಯಕ, ಆನಂದ ನಾಯಕ್, ಮಂಜುನಾಥ ನಾಯಕ್, ರಘು ಪವಾರ್, ನಾಗಬೇನಾಳ ಯುವಕರ ತಂಡ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು