2:35 AM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ

25/07/2024, 15:01

ಶಿವು ರಾಠೋಡ ನಾಗಬೇನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ತಾಂಡಾದಲ್ಲಿ ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಿತು.


ವೀರೇಶ್ ನಗರದಿಂದ ನಾಗಬೇನಾಳ ತಾಂಡಾದವರೆಗೂ ಬಂಜಾರ ಸಮುದಾಯದ ಉಡುಪು ತೊಡಗಿ ಧರಿಸಿಕೊಂಡು ಚಿಕ್ಕ ಮಕ್ಕಳು ಹಾಗೂ ಹಿರಿಯರು ಕಳಸ ಹಾಗೂ ನೃತ್ಯ ಮೂಲಕ ಶ್ರೀ ಸಂತ ಸೇವಾಲಾಲ್ ದೇವಸ್ಥಾನವರೆಗೆ ಮೆರವಣಿಗೆ ನಡೆಸಿದರು.
ಮರುದಿನ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಐತಿಹಾಸಿಕ ಸ್ಥಳವಾದ ಜಲದುರ್ಗಕ್ಕೆ ಹೋಗಿ ಎಲ್ಲಮ್ಮ ದೇವಿ ದರ್ಶನ ಪಡೆದು ಪಾವನಾರಾದರು.
ಅದರ ಜೊತೆಗೆ ಸಾಯಂಕಾಲ ನಾಗಬೇನಾಳ ತಾಂಡದಲ್ಲಿ ಬಂದು ಬಂಜಾರ ಸಮುದಾಯ ಯಾವ ರೀತಿ ಪ್ರಾರಂಭವಾಯಿತು, ಆ ಸಮಾಜ ಉದಯ ಮತ್ತು ಅದರ ನೋವು- ನಲಿವಿನ ಬಗ್ಗೆ ಒಂದು ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಜನಾ ಕಾರ್ಯಕ್ರಮವನ್ನು ಶಹಪುರ್ ಶರಣು ಹಾಗೂ ಚಿಂಚೋಳಿ ಸಾವಿತ್ರಿಬಾಯಿ ತಂಡವು ಮನರಂಜನೆ ಜೊತೆಗೆ ಸಮಾಜದ ಅರಿವು ಸಮಾಜದ ಬೆಳವಣಿಗೆ ಮತ್ತು ಸಮಾಜದ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದರು. ಕಾರ್ಯಕ್ರಮವು ರಾತ್ರಿ 10 ಬೆಳಗಿನ ಜಾವ 7 ವರೆಗೂ ನೆರವೇರಿತು. ಊರಿನ ಗುರು ಹಿರಿಯರು, ಮಹಿಳೆಯರು ಇಡೀ ರಾತ್ರಿ ಭಜನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೃಷ್ಣಪ್ಪ ನಾಯಕ, ಆನಂದ ನಾಯಕ್, ಮಂಜುನಾಥ ನಾಯಕ್, ರಘು ಪವಾರ್, ನಾಗಬೇನಾಳ ಯುವಕರ ತಂಡ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು